Mysore
25
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಓದುಗರ ಪತ್ರ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್ ನೀರು ಬಿಡಬೇಕು ಎಂದು ಆದೇಶ ಹೊರಡಿಸಿತ್ತು, ಈ ಆದೇಶವನ್ನು ರಾಜದ್ಯಂತ ಹಲವಾರು ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ವಿರೋಧಿಸಿ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಸರ್ಕಾರದ ಮೇಲೆ ಒತ್ತಡ ಹಾಕಿದ್ದವು.

ಇಂತಹ ಸಂದರ್ಭದಲ್ಲಿ ವಯನಾಡ್ ಪ್ರದೇಶದಲ್ಲಿ ಮಳೆಯಾದ್ದರಿಂದ, ಕಬಿನಿ ಜಲಾಶಯ ಭರ್ತಿಯಾಗಿ ಕಳೆದ ಎರಡು ದಿನಗಳಿಂದ ಸುಮಾರು ೧೫ ರಿಂದ ೨೦ ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವಾಗಿದೆ. ಇದರಿಂದಾಗಿ ಸದ್ಯಕ್ಕೆ ಸರ್ಕಾರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಂತಾಗಿದೆ.ಮುಂದಿನ ದಿನಗಳಲ್ಲಿಇದೇರೀತಿ ಸಂಕಷ್ಟ ಎದುರಾದಾಗ ಪರಿಸ್ಥಿತಿಯನ್ನು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಸರ್ಕಾರ ಈಗಲೇ ಚಿಂತಿಸಿ, ಸುಪ್ರೀಂ ಕೋರ್ಟ್ ಮುಂದೆ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿ, ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಇಲ್ಲದೇ ಹೋದರೆ ಇಂತಹ ಪರಿಸ್ಥಿತಿ ಆಗಾಗ ಮರುಕಳಿಸುತ್ತಲೇ ಇರುತ್ತದೆ.

– ಬೂಕನಕೆರೆ ವಿಜೇಂದ್ರ, ಮೈಸೂರು

 

Tags:
error: Content is protected !!