Mysore
25
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿ, ಬಳಿಕ ರಾಷ್ಟ್ರಗೀತೆ, ವಂದೇ ಮಾತರಂ ಗೀತೆಗೆ ಗೌರವ ಸಲ್ಲಿಸಿದರು. ಇದೇ ವೇಳೆ ನಾಡಿನ ಜನತೆಗೆ ಶುಭಾಶಯ ಕೋರಿದರು.

ಬಳಿಕ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾಣಿಕ್‌ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ತದನಂತರದಲ್ಲಿ ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು.

ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು.

 

 

Tags:
error: Content is protected !!