ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು.
ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್, ಮೂವರು ಸತ್ತಿದ್ದಾರೆ. ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು, ಬೇಟೆಗಾರರು ಎತ್ತರ ಪ್ರದೇಶದಲ್ಲಿದ್ದರು. ಅಸ್ಪಷ್ಟವಾಗಿ ಗೋಚರಿಸಿದ್ರು. ಶರಣಾಗುವಂತೆ ಅಧಿಕಾರಿಗಳು ಮನವಿ ಮಾಡಿದ್ರೂ ಕೇಳದೇ ಗುಂಡು ಹಾರಿಸಿದರು. ಅರಣ್ಯ ಸಿಬ್ಬಂದಿ ಆತ್ಮರಕ್ಷಣೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಉದ್ದೇಶದಿಂದ ಪ್ರತಿದಾಳಿ ನಡೆಸಿದರು ಎಂದು ಹೇಳಿದರು.




