Mysore
23
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು

ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ ದುರಂತ ಸಂಭವಿಸಿದೆ. ಸಿಂಗಾಪುರಕ್ಕೆ ಹೊರಟಿದ್ದ ಪನಾಮ ದೇಶದ ಧ್ವಜದ ‘ಎಮ್‌ವಿ ಓಷನ್ ವಿನ್ನರ್’ ಹೆಸರಿನ ದೈತ್ಯ ಸರಕು ಹಡಗು ಬಂಗಾಳ ಕೊಲ್ಲಿಯಲ್ಲಿ ಮುಳುಗಡೆಯಾಗಿದೆ.

24 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಪನಾಮಾ ಧ್ವಜದ ಸರಕು ಸಾಗಣೆ ಹಡಗು ಶನಿವಾರ ಒಡಿಶಾ ಕರಾವಳಿಯಿಂದ ಸುಮಾರು 240 ನಾಟಿಕಲ್ ಮೈಲು ದೂರದಲ್ಲಿ ಬಂಗಾಳ ಕೊಲ್ಲಿಯಲ್ಲಿ ಮುಳುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂವಿ ಓಷನ್ ವಿನ್ನರ್ ಹೆಸರಿನ ಈ ಹಡಗು ಒಡಿಶಾದಿಂದ ಸಿಂಗಾಪುರಕ್ಕೆ 72,100 ಟನ್ ಕಬ್ಬಿಣದ ಅದಿರನ್ನು ಸಾಗಿಸುತ್ತಿತ್ತು. ಆಗಸ್ಟ್ 20ರಂದು ರಾತ್ರಿ 10.42ರ ಸುಮಾರಿಗೆ ಪಾರಾದೀಪ್ ಬಂದರಿನಿಂದ ಹಡಗು ಹೊರಟಿತ್ತು. ಹಡಗಿನಲ್ಲಿದ್ದ 24 ಸಿಬ್ಬಂದಿಯಲ್ಲಿ 20 ಮಂದಿ ಚೀನಾ, ಮೂವರು ಮ್ಯಾನ್ಮಾರ್ ಹಾಗೂ ಒಬ್ಬರು ಬಾಂಗ್ಲಾದೇಶದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬ್ಬಂದಿಯ ರಕ್ಷಣೆಗೆ ಭಾರತೀಯ ಕರಾವಳಿ ಪಡೆ ಹಾಗೂ ಭಾರತೀಯ ನೌಕಾಪಡೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಈವರೆಗೆ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೂ 22 ಮಂದಿ ನಾಪತ್ತೆಯಾಗಿದ್ದಾರೆ. ಹಡಗಿನೊಂದಿಗೆ ಸಂಪರ್ಕ ಕಡಿತಗೊಂಡಿರುವ ಬಗ್ಗೆ ಶೋಧ ಮತ್ತು ರಕ್ಷಣಾ ನೆರವು ಕೋರಿ ಹಡಗು ನಿರ್ವಹಣೆಗೆ ಸಂಬಂಧಿಸಿದ ಕಂಪನಿಯೊಂದು ಬೆಳಗ್ಗೆ 11.48ರ ಸುಮಾರಿಗೆ ಶ್ರೀ ವಿಜಯಪುರಂನಲ್ಲಿರುವ ಭಾರತೀಯ ಕರಾವಳಿ ಪಡೆಯ ಸಾಗರ ರಕ್ಷಣಾ ಸಮನ್ವಯ ಕೇಂದ್ರಕ್ಕೆ ಮಾಹಿತಿ ನೀಡಿತ್ತು. ರಾತ್ರಿ 8ರ ಸುಮಾರಿಗೆ ಎರಡು ರಕ್ಷಣಾ ತೆಪ್ಪಗಳಿಂದ ಇಬ್ಬರು ಬದುಕುಳಿದವರನ್ನು ಐಸೋಪೋಸ್ ಸಿಬ್ಬಂದಿ ರಕ್ಷಿಸಿದರು ಎಂದು ಕರಾವಳಿ ಪಡೆ ತಿಳಿಸಿದೆ. ಶೋಧ ಕಾರ್ಯಾಚರಣೆಗೆ ಭಾರತೀಯ ಕರಾವಳಿ ಪಡೆ ಮೂರು ಹಡಗುಗಳನ್ನು ನಿಯೋಜಿಸಿದೆ.

 

 

Tags:
error: Content is protected !!