15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ.
ಇದು ಹಿಂದಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾಡಿದ ಘೋರ ಅನ್ಯಾಯವಾಗಿದೆ. ಉರ್ದು, ಮರಾಠಿ ಶಿಕ್ಷಕರ ಹುದ್ದೆಗಳ ಭರ್ತಿಯಂತೆ ಹಿಂದಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಬೇಕು.
ಸಮಾನ ಅವಕಾಶವನ್ನು ಖಾತ್ರಿಪಡಿಸುವುದು ಸರ್ಕಾರದ ಜವಾಬ್ದಾರಿ. ಶೀಘ್ರವೇ ಹಿಂದಿ ಸೇರಿದಂತೆ ಇತರ ವಿಷಯಗಳ ಶಿಕ್ಷಕರಿಗೆ ಸಮಾನ ಅವಕಾಶ ಕಲ್ಪಿಸಬೇಕು.
ನಬಿ.ಆರ್.ಬಿ.ದೋಟಿಹಾಳ, ಕೊಪ್ಪಳ


