Mysore
25
broken clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಓದುಗರ ಪತ್ರ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ ,೧೫ ನಿಮಿಷಗಳಿಗಿಂತಲೂ ಹೆಚ್ಚಿನ ಏಕಾಗ್ರತೆ ಅವರಲ್ಲಿ ನಿಲ್ಲುವುದು ಕಷ್ಟ, ಹೆಚ್ಚು ಪ್ರಶ್ನೆಗಳನ್ನು ಕೇಳುವ ಅವರ ಮನಸ್ಥಿತಿ ಅರ್ಥಮಾಡಿಕೊಂಡು ಸಮಾಧಾನದಿಂದ ಉತ್ತರಿಸಿದರೆ ಬದಲಾವಣೆ ಖಂಡಿತ ಸಾಧ್ಯ, ಶಿಕ್ಷಕರು ಮತ್ತು ಪೋಷಕರು ಇದನ್ನು ಅರ್ಥಮಾಡಿಕೊಂಡು ಬದಲಾಗಬೇಕಿದೆ ಎಂದು ಮುದ್ದೇನಹಳ್ಳಿಯ ಸತ್ಯಸಾಯಿಗ್ರಾಮ ಆಶ್ರಮದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಹಾಸನದಲ್ಲಿ ನಡೆದ ದಿವ್ಯ ಸಂಜೆ ಕಾರ್ಯಕ್ರಮದಲ್ಲಿ ವಿಶ್ಲೇಷಿಸಿರುವುದು ಪ್ರಶಂಸನೀಯ.

ಸಮಾಜದಲ್ಲಿ ಬದಲಾವಣೆ ಆಗಬೇಕಾದರೆ ಶಿಕ್ಷಣ ವ್ಯವಸ್ಥೆಯಲ್ಲಿ ನೀತಿ ಪಾಠಗಳು ಮತ್ತೆ ಶಿಕ್ಷಣ ವ್ಯವಸ್ಥೆಯ ಭಾಗವಾಗಬೇಕು. ಶಾಲಾ ಚಟುವಟಿಕೆಗಳಲ್ಲಿ ಪೋಷಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಮತ್ತು ವಿಶ್ವವಿದ್ಯಾಲಯಗಳಲ್ಲಿ ಕೌಶಲ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಬೇಕು.ಇಂದಿನ ಉದ್ಯೋಗಿಗಳ ಪೈಕಿ ಶೇ. ೯೨ ರಷ್ಟು ಮಂದಿಯ ಓದಿಗೂ ಹಾಗೂ ಕೆಲಸಕ್ಕೂ ಸಂಬಂಧವೇ ಇಲ್ಲ ಎಂದು ಸದ್ಗುರುಗಳು ವ್ಯಾಖ್ಯಾನ ಮಾಡಿರುವುದು ಅರ್ಥಪೂರ್ಣವಾಗಿದೆ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

Tags:
error: Content is protected !!