Mysore
33
broken clouds

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

KRS Dam

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಪ್ರತಿದಿನ 6 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಶಿಫಾರಸು ಮಾಡಿತ್ತು. 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಸೂಚಿಸಲಾಗಿತ್ತು.

ಈ ಶಿಫಾರಸನ್ನು ಎತ್ತಿಹಿಡಿದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿತ್ತು.

ಆದರೆ, ರಾಜ್ಯದ ಜಲಾಶಯಗಳ ನೀರಿನ ಸ್ಥಿತಿ ಹಾಗೂ ರೈತರ ಹಿತದೃಷ್ಟಿಯಿಂದ, 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ ಕ್ಯೂಸೆಕ್‌ಗೆ ಇಳಿಸಬೇಕು ಎಂದು ಕರ್ನಾಟಕ ಸರ್ಕಾರ ಇದೀಗ ಮೇಲ್ಮನವಿ ಸಲ್ಲಿಸಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕೂಡಲೇ 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ಆದೇಶ ಹೊರಡಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.

ಕರ್ನಾಟಕದ ಈ ಮೇಲ್ಮನವಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಯಾವ ನಿರ್ಧಾರ ಹೊರಬೀಳಲಿದೆ ಎಂಬುದು ಇದೀಗ ಭಾರೀ ಕುತೂಹಲ ಮೂಡಿಸಿದೆ.

Tags:
error: Content is protected !!