Mysore
28
light rain

Social Media

ಗುರುವಾರ, 06 ಆಗಸ್ಟ್ 2026
Light
Dark

ರೋಹಿಂಗ್ಯಾಗಳಿಗೆ ದೆಹಲಿಯಲ್ಲಿ ಫ್ಲಾಟ್‌ : ಹರ್ದೀಪ್ ಸಿಂಗ್ ಪುರಿ

ನವದೆಹಲಿ: ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರೊಹಿಂಗ್ಯಾ ನಿರಾಶ್ರಿತರನ್ನು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದ್ದು, ಅವರಿಗೆ ಪಶ್ಚಿಮ ದೆಹಲಿಯ ಬಕ್ಕರ್​​ವಾಲಾದಲ್ಲಿ  ಫ್ಲಾಟ್ ನೀಡಲಾಗುವುದು ಎಂದು ಬಧುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು.

ಇದಾಗಿ ಕೆಲವೇ ಗಂಟೆಗಳಲ್ಲಿ ಹೇಳಿಕೆ ಹೊರಡಿಸಿದ ಕೇಂದ್ರ ಗೃಹ ಸಚಿವಾಲಯ ಯಾವುದೇ ನಿರ್ದೇಶನವನ್ನು ನೀಡಿಲ್ಲ. ಅಕ್ರಮ ವಿದೇಶಿಯರನ್ನು ಕಾನೂನು ಮೂಲಕ ದೇಶದಿಂದ ಗಡಿಪಾರು ಮಾಡುವ ವರಗೆ ಅವರನ್ನು ಬಂಧನದಲ್ಲೇ ಇರಿಸಲಾಗುವುದು ಎಂದಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವಾಲಯ ರೊಹಿಂಗ್ಯಾಗಳನ್ನು ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ದೆಹಲಿ ಸರ್ಕಾರ ಮುಂದಾಗಿದೆ. ರೊಹಿಂಗ್ಯಾ ಅಕ್ರಮ ವಿದೇಶಿಗರು ಪ್ರಸ್ತುತ ಸ್ಥಳದಲ್ಲಿಯೇ ಮುಂದುವರಿಯುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವಾಲಯ GNCTD ಗೆ ನಿರ್ದೇಶನ ನೀಡಿದೆ. ಯಾಕೆಂದರೆ ಗೃಹಸಚಿವಾಲ ಈಗಾಗಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೂಲಕ ಸಂಬಂಧಪಟ್ಟ ದೇಶದೊಂದಿಗೆ ಅವರನ್ನು ಗಡೀಪಾರು ಮಾಡುವ ವಿಷಯ ಚರ್ಚಿಸುತ್ತಿದೆ ಎಂದಿದೆ.

ಬೆಳಗ್ಗೆ ಟ್ವೀಟ್ ಮಾಡಿದ ಪುರಿ, ದೇಶದಲ್ಲಿ ಆಶ್ರಮ ಬೇಡಿ ಬಂದ ನಿರಾಶ್ರಿತರನ್ನು ಭಾರತ ಸದಾ ಸ್ವಾಗತಿಸಿದೆ. ಮಹತ್ವದ ನಿರ್ಧಾರ ಏನೆಂದರೆ ಎಲ್ಲ ರೊಹಿಂಗ್ಯಾ ನಿರಾಶ್ರಿತರನ್ನು ದೆಹಲಿಯ ಬಕ್ಕರ್​​ವಾಲಾದಲ್ಲಿರುವ ಇಡಬ್ಯುಎಸ್ ಫ್ಲಾಟ್​​ಗೆ ಶಿಫ್ಟ್ ಮಾಡಲಾಗುವುದು. ಇಲ್ಲಿ ಇವರಿಗೆ ಮೂಲ ಸೌಕರ್ಯ, ಯುಎನ್ಎಚ್ ಸಿಆರ್ ಐಡಿ ಮತ್ತು ದಿನದ 24 ಗಂಟೆ ದೆಹಲಿ ಪೊಲೀಸ್ ರಕ್ಷಣೆ ನೀಡಲಾಗುವುದು. ದೇಶದ ವಲಸೆಗಾರರ ನೀತಿಯನ್ನು ಸಿಎಎ ಜತೆ ಜೋಡಿಸಿ ಅಪಪ್ರಚಾರ ಮಾಡಿ ತಮ್ಮ ಬೇಳೆ ಬೇಯಿಸಿಕೊಂಡವರಿಗೆ ಇದರಿಂದ ನಿರಾಶೆಯಾಗಿದೆ. ಭಾರತ ಯುಎನ್ ರೆಫ್ಯೂಗಿ ಕನ್ವೆನ್ಶನ್ 1951ನ್ನು ಗೌರವಿಸುತ್ತದೆ ಮತ್ತು ಪಾಲಿಸುತ್ತದೆ. ಯಾವುದೇ ನಿರಾಶ್ರಿತರಿಗೆ ಅವರ ಜನಾಂಗ, ಧರ್ಮ ಅಥವಾ ಸಮುದಾಯದ ಭೇದವಿಲ್ಲದೆ ಆಶ್ರಯ ಒದಗಿಸುತ್ತದೆ ಎಂದು ಸಚಿವ ಪುರಿ ಟ್ವೀಟ್ ಮಾಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!