ಸಿದ್ದಾಪುರ:- ಹಾಡುಹಗಲೇ ಹಸು ಒಂದರ ಮೇಲೆ ಹುಲಿ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹುಲಿಯನ್ನು ಸೆರೆ ಹಿಡಿಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಪ್ರಾರಂಭವಾಗಿದೆ.
ಮಾರ್ಗೋಲ್ಲಿ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ದುಬಾರೆ ಸಾಕಾನೆ ಶಿಬಿರದ 4ಆನೆಗಳ ಸಹಕಾರದಿಂದ ಕಾರ್ಯಾಚರಣೆ ಪ್ರಾರಂಭಿಸಿದ್ದು ಸ್ಥಳದಲ್ಲಿ 10 ಕ್ಯಾಮೆರಾ ಹಾಗೂ 2 ಬೋನ್ ಅಳವಡಿಸಲಾಗಿದೆ.
50ಕ್ಕೂ ಹೆಚ್ಚು ಸಿಬ್ಬಂದಿಗಳ ತಂಡದಿಂದ ಹುಲಿಯ ಚಲನವಲನ ಹೆಜ್ಜೆಗುರುತು ಪತ್ತೆ ಕಾರ್ಯಾಚರಣೆ ಚುರುಕುಗೊಂಡಿದ್ದು ಅಧಿಕಾರಿಗಳು ಸ್ಥಳದಲ್ಲೆ ಮೊಕ್ಕಾಂ ಹೂಡಿದ್ದಾರೆ





