Mysore
26
light rain

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಮಲೆಮಹದೇಶ್ವರ ಬೆಟ್ಟ ಮುಖ್ಯದ್ವಾರ ರಸ್ತೆ ಅಭಿವೃದ್ಧಿಗೆ ಕ್ರಮ : ಸಚಿವ ಆನಂದ್ ಸಿಂಗ್

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ದೇವಾಲಯದ ಮುಖ್ಯದ್ವಾರದಿಂದ ಪ್ರವಾಸಿ ಮಂದಿರ ಸಂಪರ್ಕಿಸುವ ರಸ್ತೆ ಕಾಮಗಾರಿಗೆ 2ಕೋಟಿ ಅನುದಾನ ನೀಡಲಾಗಿದೆ ಎಂದು ಪ್ರವಾಸೋದ್ಯಮ,ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಆನಂದ್ ಸಿಂಗ್ ಉತ್ತರಿಸಿದರು.

ಬೆಂಗಳೂರಿನ ವಿಧಾನಸಭೆ ಕಲಾಪದಲ್ಲಿ ಹನೂರು ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಮಲೆ ಮಾದೇಶ್ವರ ದೇವಾಲಯದ ಮುಖ್ಯದ್ವಾರದಿಂದ ಪ್ರವಾಸಿ ಮಂದಿರಕ್ಕೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ 2ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿರುತ್ತದೆ.ಈ ಕಾಮಗಾರಿಗೆ ಹತ್ತು 3ಇಪ್ಪತ್ತ ರಂದು ಆಡಳಿತಾತ್ಮಕ ಅನುಮೋದನೆ ನೀಡಿ 2ಕೋಟೆಗಳನ್ನು ವ್ಯವಸ್ಥಾಪಕ ನಿರ್ದೇಶಕರು ಕೆಆರ್ ಐಡಿಎಲ್ ಬೆಂಗಳೂರು ರವರಿಗೆ ಬಿಡುಗಡೆ ಮಾಡಲಾಗಿರುತ್ತದೆ ಕಾಮಗಾರಿ ಪ್ರಾರಂಭಿಸಬೇಕಿದೆ ಎಂದು ಉತ್ತರಿಸಿದ್ದಾರೆ. ಇದಲ್ಲದೆ ಹನೂರು ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ, ಹೊಗೇನಕಲ್ ಫಾಲ್ಸ್, ಗೋಪಿನಾಥಮ್, ಪಾಲಾರ್ ಗಡಿ ಹಾಗೂ ಒಡೆಯರಪಾಳ್ಯ ಹೊನ್ನಮೇಟಿ ಅತ್ತಿಖಾನೆ ಸೇರಿದಂತೆ 5 ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು ಇದರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!