Mysore
25
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ದಸರಾ ಯುವ ಸಂಭ್ರಮದಲ್ಲಿ ಹಾಡಿಗೆ ಹೆಜ್ಜೆ ಹಾಕಿದ ಎಸ್. ಟಿ. ಸೋಮಶೇಖರ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ನೇ ಸಾಲಿನಲ್ಲಿ ನಡೆಯುತ್ತಿರುವ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ಯುವಕರೊಂದಿಗೆ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ.

ನೆನ್ನೆಯಷ್ಟೇ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟನೆಗೊಂಡಿದ್ದು, ಎಸ್ ಟಿ ಸೋಮಶೇಖರ್ ಹಾಗೂ ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ಡಾಲಿ ಧನಂಜಯ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!