Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: 6 ಮಂದಿಗೆ ಗಾಯ

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ಪಟ್ಟಣದಲ್ಲಿ ಸಂಭವಿಸಿದೆ.

ಕೊಳ್ಳೇಗಾಲ ಮೂಲಕ ಹನೂರಿಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹನೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀಪದ ಸ್ವಾಮಿಹಳ್ಳದ ಎಡಬದಿಯಲ್ಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರು ಅತಿ ವೇಗದಲ್ಲಿ ಬಂದಿದ್ದರಿಂದ ವಿದ್ಯುತ್ ಕಂಬ ತುಂಡಾಗಿ ಕೆಶಿಪ್ ರಸ್ತೆ ಕಾಮಗಾರಿಗಾಗಿ ಅಗೆಯಲಾಗಿದ್ದ ಗುಂಡಿಗೆ ಬಿದ್ದಿದೆ ಎಂದು ತಿಳಿದುಬಂದಿದೆ.ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದು, ಇವರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದ್ದು, ಇವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರನ್ನು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!