Mysore
27
overcast clouds

Social Media

ಶನಿವಾರ, 20 ಜೂನ್ 2026
Light
Dark

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳಿಗೆ ಆಹ್ವಾನ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಶ್ರೀರಂಗಪಟ್ಟಣದಲ್ಲಿ ಸೆ. 28 ರಿಂದ ಅ.2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022 ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು.
ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು, ಶ್ರೀಗಳನ್ನು ಭೇಟಿ ಮಾಡಿ ದಸರಾ ಉದ್ಘಾಟನೆಗೆ ಆಹ್ವಾನಿಸಿದರು.
ಶ್ರೀರಂಗಪಟ್ಟಣ ದಸರಾ ಮಹೋತ್ಸವ-೨೦೨೨ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಎಲ್.ಹುಲ್ಮನಿ, ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!