Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಬಿಜೆಪಿ ಬೆಂಬಲಿತ 29 ಸದಸ್ಯರು ಒಗ್ಗಟ್ಟಾಗಿದ್ದೇವೆ : ಮ, ಬೆಟ್ಟ ಗ್ರಾಪಂ ಅಧ್ಯಕ್ಷ ಕುಮಾರ್

ಹನೂರು: ಮಲೆಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ 29 ಬಿಜೆಪಿ ಬೆಂಬಲಿತ ಸದಸ್ಯರು ಒಗ್ಗಟ್ಟಾಗಿದ್ದೇವೆ ಕೆಲವೊಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಮ,ಬೆಟ್ಟ ಗ್ರಾಪಂ ಅಧ್ಯಕ್ಷ ಕುಮಾರ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ) ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಿದ್ದೇವೆ.ಇವರ ಸಹಕಾರದಿಂದ 29
ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದೇವೆ. ಆಂತರಿಕ ಒಪ್ಪಂದದಂತೆ ಹದಿನೈದು ತಿಂಗಳ ಅವಧಿ ನನಗೆ ಅಧ್ಯಕ್ಷ ಸ್ಥಾನ ನಿಗದಿಪಡಿಸಲಾಗಿತ್ತು. ತದನಂತರ ರಾಜಿನಾಮೆಯನ್ನು ಸಹ ನೀಡಿದ್ದೆ ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ರಾಜೀನಾಮೆ ವಾಪಸ್ ಪಡೆದುಕೊಂಡೆ,ಆ ನಂತರ ಕೆಲವರು ಅವಿಶ್ವಾಸ ಮಂಡನೆಗೆ ಉಪವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದರು.ಆದರೆ ಕಾಂಗ್ರೆಸ್ ಬೆಂಬಲಿತ ಸದಸ್ಯರು ಸೇರಿದಂತೆ ಎಲ್ಲ ಸದಸ್ಯರು ನನಗೆ ಬೆಂಬಲ ನೀಡುವುದಾಗಿ ತಿಳಿಸಿ ನನಗೆ ಸಹಕಾರ ನೀಡಿದ್ದಾರೆ .ನಾನು ವಿಶ್ವಾಸ ಮಂಡಿಸಿದ್ದೇನೆ ಎಂದು ತಿಳಿಸಿದರು.

ಗ್ರಾಪಂ ಸದಸ್ಯ ಶರವಣ ಮಾತನಾಡಿ ನಾವು ಎಲ್ಲಾ ಸದಸ್ಯರು ಒಗ್ಗಟ್ಟಿನಿಂದ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯನ್ನು ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡಿ ನಮ್ಮ ಒಗ್ಗಟ್ಟನ್ನು ಮುರಿಯಲು ಯತ್ನಿಸುತ್ತಿದ್ದಾರೆ ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ನಾವು ಜನಧ್ವನಿ ಬಿ ವೆಂಕಟೇಶ್ ರವರ ಮಾರ್ಗದರ್ಶನದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ .ಅವರು ಯಾರನ್ನೂ ಸಹ ಎತ್ತಿಕಟ್ಟಿಲ್ಲ ಇದೆಲ್ಲ ಊಹಾಪೋಹ ಯಾರೂ ಸಹ ಇದಕ್ಕೆ ಕಿವಿಗೊಡಬಾರದು, ನಾವು ಒಂದೇ ಬಣ ಅದು ಜನಧ್ವನಿ ಬಿ ವೆಂಕಟೇಶ್ ಅವರ ಬಣ ಎಂದು ಸ್ಪಷ್ಟನೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!