Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

15 ಸೆಕೆಂಡ್ ಗಳಲ್ಲೇ ಮುಗಿದ ಜಟ್ಟಿ ಕಾಳಗ

ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ !

ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ ಸಲ್ಲಿಸಿದ ಕೂಡಲೇ ಕಾಳಗ ಪ್ರಾರಂಭಗೊಂಡಿತು.
ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಜ್ ಜಟ್ಟಿ ದುರಾಳಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿಯ ತಲೆಭಾಗಕ್ಕೆ ವಜ್ರನಖ ದಿಂದ ಹೊಡೆದು ಕ್ಷಣಾರ್ಧದಲ್ಲೇ ರಕ್ತ ಚಿಮ್ಮಿಸುವ ಮೂಲಕ ಮುಕ್ತಾಯಗೊಂಡಿತು.

ಈ ಬಾರಿ ಮೈಸೂರಿನ ಉಸ್ತಾದ್ ಟೈಗರ್ ಬಾಲಾಜಿ ಅವರ ಮಗ ಮೈಸೂರಿನ ವಿಷ್ಣು ಜಟ್ಟಿ ಮತ್ತು ಬೆಂಗಳೂರಿನ ಉಸ್ತಾದ್ ಕೃಷ್ಣ ಶೆಟ್ಟಿ ಶಿಷ್ಯ ತಾರಾನಾಥ ಜೆಟ್ಟಿ ನಡುವೆ ಕಾಳಗ ನಡೆಯಿತು. ಎರಡನೇ ಜೋಡಿಯಾಗಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿ ಮತ್ತು ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಹರ ಜಟ್ಟಿ ನಡುವೆ ಕಾಳಗ ಜರುಗಿತು.ಇದಕ್ಕೂ ಮೊದಲು ನಿಂಬುಜಾದೇವಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಜಟ್ಟಿಗಳನ್ನು ಕರೆ ತರಲಾಯಿತು. ಜಟ್ಟಿ ಕಾಳಗ ನಡೆಯುವಾಗ ರಾಜಮನೆತನದ ಕುಟುಂಬದವರು ಹಾಜರಿದ್ದು ವೀಕ್ಷಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!