Mysore
24
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಬೆಳ್ಳಿ ರಥದಲ್ಲಿ ಅರಮನೆಗೆ ಬಂತು ಉತ್ಸವ ಮೂರ್ತಿ!

 ಮೈಸೂರು :ಸಾಂಸ್ಕೃತಿಕ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಮೇಳೈಸಿದ್ದು, ಚಾಮುಂಡಿ ಬೆಟ್ಟದಿಂದ ಅರಮನೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ತರಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು ದೇವಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಬೆಳ್ಳಿ ರಥದಲ್ಲಿ ವಿರಾಜಮಾನವಾದ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಮಾರ್ಗದಲ್ಲಿ ಸಾವಿರಾರು ಜನರು ಕಣ್ತುಂಬಿಕೊಂಡರು. ಚಾಮುಂಡಿ ಬೆಟ್ಟದಿಂದ ಭಕ್ತರ ಹರ್ಷೋದ್ಘಾರಗಳ ನಡುವೆ ಉತ್ಸವ ಮೂರ್ತಿ ಅರಮನೆಗೆ ಆಗಮನ‌. ಅರಮನೆಗೆ ಆಗಮಿಸುವಾಗ ಮಾರ್ಗಮಧ್ಯೆ ಅಲ್ಲಲ್ಲಿ ಉತ್ಸವ ಮೂರ್ತಿಗೆ ಭಕ್ತರು ಪೂಜೆ ಸಲ್ಲಿಸಿದರು. ಇನ್ನು, ಅರಮನೆಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಸ್ವಾಗತಕ್ಕೆ ಬಂದ ಗಜಪಡೆ ಆನೆಗಳಾದ ಅರ್ಜುನ ಮತ್ತು ವಿಜಯ ಸ್ವಾಗತಿಸಿದವು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!