Mysore
27
scattered clouds

Social Media

ಬುಧವಾರ, 20 ಮೇ 2026
Light
Dark

ಸೋನಿಯಾ, ರಾಹುಲ್ ಬಂದಿದ್ದಕ್ಕೆ  ಮಂಡ್ಯ ಜನರಿಗೆ ದೇವೇಗೌಡರ ಮೇಲಿನ ಪ್ರೀತಿ ಕಡಿಮೆ ಆಗಲ್ಲ’

ಮಂಡ್ಯ  : ಸಕ್ಕರೆ ನಾಡು ಮಂಡ್ಯ ಜಿಲ್ಲೆಯು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ. ಅಲ್ಲಿಗೆ ಸೋನಿಯಾ ಗಾಂಧಿಯವರು ಬರಲಿ, ರಾಹುಲ್ ಗಾಂಧಿಯವರು ಬರಲಿ. ಮಂಡ್ಯದ ಜನತೆ ಮಾಜಿ ಪ್ರಧಾನಿ ದೇವೇಗೌಡರ ಮೇಲಿಟ್ಟಿರುವ ಪ್ರೀತಿ ಒಂದಿಷ್ಟೂ ಕಡಿಮೆಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದ ಚಿಕ್ಕ ಬೋರೇಗೌಡನ ದೊಡ್ಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ‘‘ಮಂಡ್ಯದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಪಾದಯಾತ್ರೆ ನಡೆಸುವುದರ ಬಗ್ಗೆ ನಿಮ್ಮ ಅಭಿಪ್ರಾಯವೇನು’’ ಎಂದು ಕೇಳಲಾದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು. ಅಲ್ಲದೆ, ‘’ಮಂಡ್ಯ ಜಿಲ್ಲೆಯು ಯಾವತ್ತೂ ಜೆಡಿಎಸ್ ನ ಭದ್ರಕೋಟೆಯಾಗಿರುತ್ತೆ. ಹಿಂದೆಯೂ ಮುಂದೆಯೂ ಅದು ಅದೇ ರೀತಿಯಲ್ಲೇ ಮುಂದುವರಿಯುತ್ತದೆ’’ ಎಂದು ಹೇಳಿದರು.

ಇದೇ ಮಾತುಕತೆ ವೇಳೆ ಚನ್ನಪಟ್ಟಣದಲ್ಲಿ ಇತ್ತೀಚೆಗೆ ನಡೆದಿರುವ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ವಿಚಾರ ಪ್ರಸ್ತಾಪವಾಯಿತು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ‘’ಚನ್ನಪಟ್ಟಣ ಕೂಡ ಜೆಡಿಎಸ್ ನ ಭದ್ರಕೋಟೆಯೇ ಆಗಿದೆ. ಮುಂಬರುವ ಚುನಾವಣೆಯಲ್ಲಿ ಅಲ್ಲಿನ ಮತದಾರರು ಅದನ್ನು ಸಾಬೀತುಪಡಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಅದನ್ನು ಸರಿಪಡಿಸಬೇಕಿದೆ’’ ಎಂದು ತಿಳಿಸಿದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!