ಕೊಡಗು : ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ ಶಿಬಿರ ನಿರ್ಮಿಸಲು ಸರಕಾರ 50 ಲಕ್ಷ ರೂ. ಅನುದಾನ ಒದಗಿಸಿತ್ತು. ಸಾಕಾನೆ ಶಿಬಿರದ ಜೊತೆಗೆ ಟ್ರೀಪಾರ್ಕ್ ಕೂಡ ಲೋಕಾರ್ಪಣೆಗೊಳಿಸಲಾಗುತ್ತಿದೆ.ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿಯಲ್ಲಿ ಸಾಕಾನೆಗಳ ನೂತನ ಶಿಬಿರ ಅ.8ರಂದು ಲೋಕಾರ್ಪಣೆಗೊಳ್ಳಲಿದೆ. ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ.
ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ ಶಿಬಿರ ನಿರ್ಮಿಸಲು ಸರಕಾರ 50 ಲಕ್ಷ ರೂ. ಅನುದಾನ ಒದಗಿಸಿತ್ತು. ಸಾಕಾನೆ ಶಿಬಿರದ ಜೊತೆಗೆ ಟ್ರೀಪಾರ್ಕ್ ಕೂಡ ಲೋಕಾರ್ಪಣೆಗೊಳಿಸಲಾಗುತ್ತಿದೆ.





