Mysore
23
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ದ್ವಿತೀಯ ಪಿಯು. ವಿದ್ಯಾರ್ಥಿ ನೇಣಿಗೆ ಶರಣು

ಮೈಸೂರು: ಪಡುವಾರಹಳ್ಳಿಯ ಸಿಗ್ನಲ್ ಬಳಿ ಇರುವ ಬಿಜಿಎಸ್ ವಿದ್ಯಾರ್ಥಿನಿಲಯದ ಕೋಣೆಯಲ್ಲಿ ವಿದ್ಯಾರ್ಥಿಯೊಬ್ಬರು ಸಾವಿಗೆ ಮಾಡಿಕೊಂಡಿದ್ದಾರೆ.
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ದೀಕ್ಷಿತ್(೧೭) ಆತ್ಮಹತ್ಯೆಗೆ ಶರಣಾದವರು. ಇವರು ಕುವೆಂಪುನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ಸಂಜೆ ಹಾಸ್ಟೆಲ್ನ ಕೋಣೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ರಾತ್ರಿ 10 ಗಂಟೆ ಸುಮಾರಿಗೆ ಈ ವಿಷಯ ಗೊತ್ತಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಲ್ಲದೆ, ಕುಟುಂಬಸ್ಥರು ಹಾಸ್ಟೆಲ್ ಮುಂದೆ ಜಮಾಯಿಸಿದ್ದರು. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಈ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!