ಕೃಷಿ

ಬರ ನಿರ್ವಹಣೆಗಾಗಿ 31 ಜಿಲ್ಲೆಗಳಿಗೆ 324 ಕೋಟಿ ರೂ ಬಿಡುಗಡೆ: ಕೃಷಿ ಸಚಿವರು

ಮುಂದಿನ ದಿನಗಳಲ್ಲಿ ಕುಡಿಯುವ ನೀರಿ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಎಂದು ಕೃಷಿ ಸಚಿವರಾದ ಚೆಲುವ ನಾರಾಯಣಸ್ವಾಮಿ ಅವರು ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದರಾಜು ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಆರ್‌ಬಿಐ ನಿರ್ದೇಶನದಂತೆ ರೈತರ ಬೆಳೆ ಸಾಲದ ಮರುಪಾವತಿ ಅವಧಿಯನ್ನು ಅಲ್ಪಾವಧಿಯಿಂದ ಮಧ್ಯಾವಧಿ ಅಥವಾ ದೀರ್ಘಾವಧಿವರೆಗೆ ರೀ ಸ್ಟ್ರಕ್ಚರ್ ಮಾಡಲು ಎಸ್‌ಎಲ್‌ಬಿಸಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.‌

ರಾಜ್ಯದಲ್ಲಿ 236 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ವರದಿಯನ್ವಯ 46.11 ಲಕ್ಷ ಹೆಕ್ಟೇರ್ ಕೃಷಿ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಸೇರಿದಂತೆ ಒಟ್ಟು 48.17 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದು, ಬೆಳೆಹಾನಿ ಇನ್‌ಪುಟ್ ಸಬ್ಸಿಡಿಗೆ ಎನ್‌ಡಿಆರ್‌ಎಫ್ ಅಡಿಯಲ್ಲಿ ರೂ.4663.12 ಕೋಟಿ ರೂ.ಗಳ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನವನ್ನು ನಿರೀಕ್ಷಿಸಿ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಬೆಳೆಹಾನಿ ಪರಿಹಾರದ ಮೊಲದನೇ ಕಂತಾಗಿ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ 2000 ರೂ. ರೈತರಿಗೆ ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಕೋಲಾರ ಜಿಲ್ಲೆಯಲ್ಲಿ ಶೇ.11ರಷ್ಟು ಮಳೆ ಕೊರತೆಯಾಗಿದೆ. ಈಲ್ಲೆ ಆರೂ ತಾಲೂಕುಗಳಲ್ಲಿ ಸುಮಾರು 219.87 ಕೋಟಿ ರೂ.ನಷ್ಟವಾಗಿದೆ. ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನಷ್ಟವನ್ನು ಅಂದಾಜು ಮಾಡಿದ್ದಾರೆ. ಬೇಸಿಗೆಯ ಬಗ್ಗೆ ಭೀತಿ ಮೂಡಿದೆ ಎಂದು ಇದೆ ವೇಳೆ ಗೋವಿಂದರಾಜು ಅವರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಶು ಸಂಗೋಪನೆ ಇಲಾಖೇಯ ವರದಿಯನುಸಾರ ಕೋಲಾರ ಜಿಲ್ಲೆಯಲ್ಲಿ 2.23 ಲಕ್ಷ ಟನ್ ಮೇವು ಲಭ್ಯವಿದೆ. ಎಸ್‌ಡಿಆರ್‌ಎಫ್ ಅಡಿಯಲ್ಲಿ ಮೇವಿನ ಕಿರು ಪೊಟ್ಟಣಗಳನ್ನು ನಿಯಮಾನುಸಾರ ಖರೀದಿಸಲು 20 ಕೋಟಿ ರೂ. ಗಳನ್ನು ಪಶು ಸಂಗೋಪನೆ ಇಲಾಖೆಗೆ ಬಿಡುಗಡೆಗೊಳಿಸಲಾಗಿದೆ. 31 ಜಿಲ್ಲೆಗಳಿಗೆ ಬಿಡುಗಡೆ ಮಾಡಿದ 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ ಪೈಕಿ ಕೋಲಾರ ಜಿಲ್ಲೆಗೆ 9 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈಲ್ಲೆಯ 4 ಗ್ರಾಮಗಳಲ್ಲಿ ಖಾಸಗಿ ಬೋರವೆಲ್ ಮೂಲಕ ಬಾಡಿಗೆ ಆಧಾರದ ಮೇಲೆ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

andolana

Share
Published by
andolana
Tags: Karnataka

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

16 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago