ಕೃಷಿ

ಬರ ನಿರ್ವಹಣೆಗಾಗಿ 31 ಜಿಲ್ಲೆಗಳಿಗೆ 324 ಕೋಟಿ ರೂ ಬಿಡುಗಡೆ: ಕೃಷಿ ಸಚಿವರು

ಮುಂದಿನ ದಿನಗಳಲ್ಲಿ ಕುಡಿಯುವ ನೀರಿ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಎಂದು ಕೃಷಿ ಸಚಿವರಾದ ಚೆಲುವ ನಾರಾಯಣಸ್ವಾಮಿ ಅವರು ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದರಾಜು ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಆರ್‌ಬಿಐ ನಿರ್ದೇಶನದಂತೆ ರೈತರ ಬೆಳೆ ಸಾಲದ ಮರುಪಾವತಿ ಅವಧಿಯನ್ನು ಅಲ್ಪಾವಧಿಯಿಂದ ಮಧ್ಯಾವಧಿ ಅಥವಾ ದೀರ್ಘಾವಧಿವರೆಗೆ ರೀ ಸ್ಟ್ರಕ್ಚರ್ ಮಾಡಲು ಎಸ್‌ಎಲ್‌ಬಿಸಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.‌

ರಾಜ್ಯದಲ್ಲಿ 236 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ವರದಿಯನ್ವಯ 46.11 ಲಕ್ಷ ಹೆಕ್ಟೇರ್ ಕೃಷಿ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಸೇರಿದಂತೆ ಒಟ್ಟು 48.17 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದು, ಬೆಳೆಹಾನಿ ಇನ್‌ಪುಟ್ ಸಬ್ಸಿಡಿಗೆ ಎನ್‌ಡಿಆರ್‌ಎಫ್ ಅಡಿಯಲ್ಲಿ ರೂ.4663.12 ಕೋಟಿ ರೂ.ಗಳ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನವನ್ನು ನಿರೀಕ್ಷಿಸಿ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಬೆಳೆಹಾನಿ ಪರಿಹಾರದ ಮೊಲದನೇ ಕಂತಾಗಿ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ 2000 ರೂ. ರೈತರಿಗೆ ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಕೋಲಾರ ಜಿಲ್ಲೆಯಲ್ಲಿ ಶೇ.11ರಷ್ಟು ಮಳೆ ಕೊರತೆಯಾಗಿದೆ. ಈಲ್ಲೆ ಆರೂ ತಾಲೂಕುಗಳಲ್ಲಿ ಸುಮಾರು 219.87 ಕೋಟಿ ರೂ.ನಷ್ಟವಾಗಿದೆ. ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನಷ್ಟವನ್ನು ಅಂದಾಜು ಮಾಡಿದ್ದಾರೆ. ಬೇಸಿಗೆಯ ಬಗ್ಗೆ ಭೀತಿ ಮೂಡಿದೆ ಎಂದು ಇದೆ ವೇಳೆ ಗೋವಿಂದರಾಜು ಅವರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಶು ಸಂಗೋಪನೆ ಇಲಾಖೇಯ ವರದಿಯನುಸಾರ ಕೋಲಾರ ಜಿಲ್ಲೆಯಲ್ಲಿ 2.23 ಲಕ್ಷ ಟನ್ ಮೇವು ಲಭ್ಯವಿದೆ. ಎಸ್‌ಡಿಆರ್‌ಎಫ್ ಅಡಿಯಲ್ಲಿ ಮೇವಿನ ಕಿರು ಪೊಟ್ಟಣಗಳನ್ನು ನಿಯಮಾನುಸಾರ ಖರೀದಿಸಲು 20 ಕೋಟಿ ರೂ. ಗಳನ್ನು ಪಶು ಸಂಗೋಪನೆ ಇಲಾಖೆಗೆ ಬಿಡುಗಡೆಗೊಳಿಸಲಾಗಿದೆ. 31 ಜಿಲ್ಲೆಗಳಿಗೆ ಬಿಡುಗಡೆ ಮಾಡಿದ 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ ಪೈಕಿ ಕೋಲಾರ ಜಿಲ್ಲೆಗೆ 9 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈಲ್ಲೆಯ 4 ಗ್ರಾಮಗಳಲ್ಲಿ ಖಾಸಗಿ ಬೋರವೆಲ್ ಮೂಲಕ ಬಾಡಿಗೆ ಆಧಾರದ ಮೇಲೆ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

andolana

Share
Published by
andolana
Tags: Karnataka

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

43 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

1 hour ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

1 hour ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

3 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

5 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

6 hours ago