ಕೃಷಿ

ಎಲೆ ಚುಕ್ಕೆ ರೋಗ ಅಧ್ಯಯನಕ್ಕೆ ಸಮಿತಿ ರಚನೆ: ಆರಗ ಜ್ಞಾನೇಂದ್ರ ಸ್ವಾಗತ

ಬೆಂಗಳೂರು: ರಾಜ್ಯದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ತಜ್ಞರನ್ನು ಒಳಗೊಂಡ ಸಮಿತಿ ರಚನೆ ನಿರ್ಧಾರವನ್ನು ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದು ಆಶಿಸಿದ್ದಾರೆ.

ಕಳೆದ ವಾರವಷ್ಟೇ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಕೋರಿ ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದ ನಿಯೋಗ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಸಮಸ್ಯೆಯ ಪರಿಹಾರಕ್ಕೆ ಕ್ಷಿಪ್ರ ಗತಿಯಲ್ಲಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು.ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು ಕಾಳ್ಗಿಚ್ಚಿನಂತೆ ಇತರೆಡೆಗೆ ಹರಡುತ್ತಿದೆ ಎಂದು ಸಚಿವರು, ಆತಂಕ ವ್ಯಕ್ತಪಡಿಸಿದರು.

ಸರಿವಸುಮಾರು ಐವತ್ತು ಲಕ್ಷ ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಜೀವನೋಪಾಯ ಕಲ್ಪಿಸಿಕೊಟ್ಟಿರುವ ಅಡಿಕೆ ಬೆಳೆ ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ ಎಂದು ಹೇಳಿದರು.

andolanait

Share
Published by
andolanait

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

4 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

4 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

4 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

5 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

5 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

5 hours ago