ಕೃಷಿ

ಎಲೆ ಚುಕ್ಕೆ ರೋಗ ಅಧ್ಯಯನಕ್ಕೆ ಸಮಿತಿ ರಚನೆ: ಆರಗ ಜ್ಞಾನೇಂದ್ರ ಸ್ವಾಗತ

ಬೆಂಗಳೂರು: ರಾಜ್ಯದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ತಜ್ಞರನ್ನು ಒಳಗೊಂಡ ಸಮಿತಿ ರಚನೆ ನಿರ್ಧಾರವನ್ನು ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದು ಆಶಿಸಿದ್ದಾರೆ.

ಕಳೆದ ವಾರವಷ್ಟೇ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಕೋರಿ ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದ ನಿಯೋಗ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಸಮಸ್ಯೆಯ ಪರಿಹಾರಕ್ಕೆ ಕ್ಷಿಪ್ರ ಗತಿಯಲ್ಲಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು.ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು ಕಾಳ್ಗಿಚ್ಚಿನಂತೆ ಇತರೆಡೆಗೆ ಹರಡುತ್ತಿದೆ ಎಂದು ಸಚಿವರು, ಆತಂಕ ವ್ಯಕ್ತಪಡಿಸಿದರು.

ಸರಿವಸುಮಾರು ಐವತ್ತು ಲಕ್ಷ ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಜೀವನೋಪಾಯ ಕಲ್ಪಿಸಿಕೊಟ್ಟಿರುವ ಅಡಿಕೆ ಬೆಳೆ ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ ಎಂದು ಹೇಳಿದರು.

andolanait

Share
Published by
andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

39 mins ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

2 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

8 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

8 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

8 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

8 hours ago