ಕೃಷಿ

ಚಂಡಮಾರುತದ ಪರಿಣಾಮ : ಡಿ.12ರವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಚೆನ್ನೈ: ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಮಾಂಡೌಸ್ ಚಂಡಮಾರುತ ಇಂದು ಮಧ್ಯರಾತ್ರಿಯಿಂದ ತಮಿಳುನಾಡಿನ ಉತ್ತರ, ಪುದುಚೇರಿ ಮತ್ತು ಆಂಧ್ರಪ್ರದೇಶದ ಶ್ರೀಹರಿಕೋಟಾದ ತೀರ ಪ್ರದೇಶಗಳನ್ನು ಹಾದುಹೋಗಲಿದೆ.  ಚಂಡಮಾರುತದ ಪರಿಣಾಮ ಡಿಸೆಂಬರ್ 12ರವರೆಗೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.

ಡಿಸೆಂಬರ್ 11 ಹಾಗೂ 12ರಂದು ಕರ್ನಾಟಕ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು, ಮಿಂಚಿನ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕರ್ನಾಟಕದ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

andolanait

Recent Posts

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

10 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago