ಕೃಷಿ

ಕಾವೇರಿ ನದಿ ಪಾತ್ರದ 40 ಸಾವಿರ ಹೆಕ್ಟರ್ ಪ್ರದೇಶಕ್ಕೂ ಸಂಪೂರ್ಣ ನೀರು : ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ

ಬೆಂಗಳೂರು– ಕಾವೇರಿ ನದಿ ಪಾತ್ರದ 40 ಸಾವಿರ ಹೆಕ್ಟರ್ ಪ್ರದೇಶಕ್ಕೂ ಈ ಭಾರಿ ಸಂಪೂರ್ಣ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದರು.
ವಿಧಾನ ಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯ ಮಧು ಜಿ.ಮಾದೇಗೌಡರು ಪ್ರಶ್ನೆ ನಾಲೆಯ ಕೊನೆಯ ಭಾಗಕ್ಕೆ ನೀರು ಹರಿಸಿ ನಂತರ ಮೊದಲ ಭಾಗಕ್ಕೆ ನೀರು ಪೂರೈಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಕಾನೂನು ಇರುವುದು ಮೊದಲು ಕೊನೆಯ ಭಾಗದಿಂದ ನೀರು ಹರಿಸಿಕೊಂಡು ಬಂದು ಆ ಮೇಲೆ ಮೊದಲ ಭಾಗಕ್ಕೆ ಹರಿಸಬೇಕು ಎಂದೇ ಕಾನೂನು ಜಾರಿಯಲ್ಲಿದೆ. ಆದರೆ ಮಂಡ್ಯದಲ್ಲಿ ಆ ರೀತಿ ಮಾಡಲು ಎಷ್ಟು ಜನ ಪೊಲೀಸರನ್ನು ಕಾವಲಿಗೆ ನಿಲ್ಲಿಸಬೇಕು ಎಂಬ ಬಗ್ಗೆ ಸದಸ್ಯರೆ ಉತ್ತರ ಹೇಳಬೇಕು ಎಂದರು.
ಕೆಆರ್‍ಎಸ್, ಹೇಮಾವತಿ, ಕಬಿನಿ ಜಲಾಶಯಗಳಲ್ಲಿ ಫೆ.14ರವರೆಗೆ 29.086 ಟಿಎಂಸಿ ನೀರು ಲಭ್ಯ ಇದೆ. ನೀರಿನ ಕೊರತೆ ಇಲ್ಲ. ಹಾಗಾಗಿ ಜಲಾನಯನ ಪ್ರದೇಶ್ ಎಲ್ಲಾ ಭಾಗಗಳಿಗೂ ನೀರು ಪೂರೈಸಲಾಗುವುದು ಎಂದು ಹೇಳಿದರು.
ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿಗೆ ಹೇಮಾವತಿ ನದಿಯಿಂದ ನಾಲೆಯ ಮೂಲಕ ಕೆರೆಗಳಿಗೆ ನೀರನ್ನು ಹರಿಸುವ ಕಾಮಗಾರಿಯನ್ನು ಇದೇ ವರ್ಷದ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಸದಸ್ಯ ಅ.ದೇವೇಗೌಡರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಶಿವಮೊಗ್ಗ ಜಿಲ್ಲೆಯ ತುಂಗಾ ನದಿಯಿಂದ ಶಿವಮೊಗ್ಗ ಗ್ರಾಮಾಂತರ ಪ್ರದೇಶದ ಕೆರೆಗಳಿಗೆ ನೀರು ಪೂರೈಸುವ ಏತ ನೀರಾವರಿ ಯೋಜನೆಗಳ ಅಂದಾಜು ವೆಚ್ಚವನ್ನು ಹೆಚ್ಚಿಸಿದ್ದೇಕೆ ಎಂದು ಸದಸ್ಯ ಮಂಜುನಾಥ್ ಭಂಡಾರಿ ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಹೆಚ್ಚುವರಿ ತೆರಿಗೆ ಹೊರೆ, ಪೈಪ್ ಲೈನ್ ಬದಲಾವಣೆ ಕಾಮಗಾರಿಗಳು ಹೊಸದಾಗಿ ಸೇರ್ಪಡೆಯಾಗಿದ್ದರಿಂದ ಯೋಜನಾ ವೆಚ್ಚವನ್ನು ಪರಿಷ್ಕರಿಸಲಾಗಿದೆ. ಆ ವೇಳೆ ಮೂಲ ಯೋಜನಾ ವರದಿಯ ಮೊತ್ತಕ್ಕೆ ಶೇ.25.07ರಷ್ಟು ಪ್ರಮಾಣದ ಒಳಗಿರುವಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಮುರನೇ ಹಂತದ ಕಾಮಗಾರಿಗೆ ಮುಳುಗಡೆಯಾಗುವ ಗ್ರಾಮಗಳ ಪುನರ್ ವಸತಿಗೆ ಕೈಗೊಂಡ ಕ್ರಮಗಳ ಕುರಿತು ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 20 ಗ್ರಾಮಗಳು ಮುಳುಗಡೆಯಾಗಲಿವೆ. ಅವುಗಳ ಪೈಕಿ ಎಂಟು ಗ್ರಾಮಗಲ ಪುನರ್ ವಸತಿಗೆ ಕೇಂದ್ರಗಳನ್ನು ಗುರುತಿಸಲಾಗಿದೆ. ಇನ್ನೂ 12 ಗ್ರಾಮಗಳಿಗೆ ಸ್ಥಳ ಗುರುತಿಸಬೇಕಿದೆ ಎಂದು ವಿವರಿಸಿದರು.
ಕೃಷ್ಣಾ ನದಿ ವಿವಾದ ಕುರಿತ ನ್ಯಾಯಾಧೀಕರಣ ನೀಡಿರುವ ತೀರ್ಪು ಇನ್ನೂ ಅಧಿಸೂಚನೆ ಜಾರಿಯಾಗಿಲ್ಲ. ಈ ಹಂತದಲ್ಲಿ ಎಷ್ಟು ಪ್ರದೇಶಕ್ಕೆ ನೀರು ಪೂರೈಸಲಾಗುವುದು ಎಂದು ಸ್ಪಷ್ಟವಾಗಿ ಹೇಳುವುದು ಸಾಧ್ಯವಿಲ್ಲ. ಆದರೂ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ನ್ಯಾಯಾಧೀಕರಣದ ತೀರ್ಪನ್ನು ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಏರಲಾಗುವುದು ಎಂದರು.
ಪುನರ್ವಸತಿ ಯೋಜನೆಗೆ ಪರಿಹಾರ ನೀಡಲು ತಾರತಮ್ಯ ಇತ್ತು. ಕೃಷ್ಣ ಮೇಲ್ದಂಡೆಗೆ ಸೀಮಿತವಾಗಿ ಏಕರೂಪದ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಅದೇ ಮಾದರಿಯನ್ನು ಎತ್ತಿನಹೊಳೆ ಯೋಜನೆಗೆ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

1 hour ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

4 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

6 hours ago