ಕೃಷಿ

ಕಾವೇರಿ ನದಿ ಪಾತ್ರದ 40 ಸಾವಿರ ಹೆಕ್ಟರ್ ಪ್ರದೇಶಕ್ಕೂ ಸಂಪೂರ್ಣ ನೀರು : ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ

ಬೆಂಗಳೂರು– ಕಾವೇರಿ ನದಿ ಪಾತ್ರದ 40 ಸಾವಿರ ಹೆಕ್ಟರ್ ಪ್ರದೇಶಕ್ಕೂ ಈ ಭಾರಿ ಸಂಪೂರ್ಣ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದರು.
ವಿಧಾನ ಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯ ಮಧು ಜಿ.ಮಾದೇಗೌಡರು ಪ್ರಶ್ನೆ ನಾಲೆಯ ಕೊನೆಯ ಭಾಗಕ್ಕೆ ನೀರು ಹರಿಸಿ ನಂತರ ಮೊದಲ ಭಾಗಕ್ಕೆ ನೀರು ಪೂರೈಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಕಾನೂನು ಇರುವುದು ಮೊದಲು ಕೊನೆಯ ಭಾಗದಿಂದ ನೀರು ಹರಿಸಿಕೊಂಡು ಬಂದು ಆ ಮೇಲೆ ಮೊದಲ ಭಾಗಕ್ಕೆ ಹರಿಸಬೇಕು ಎಂದೇ ಕಾನೂನು ಜಾರಿಯಲ್ಲಿದೆ. ಆದರೆ ಮಂಡ್ಯದಲ್ಲಿ ಆ ರೀತಿ ಮಾಡಲು ಎಷ್ಟು ಜನ ಪೊಲೀಸರನ್ನು ಕಾವಲಿಗೆ ನಿಲ್ಲಿಸಬೇಕು ಎಂಬ ಬಗ್ಗೆ ಸದಸ್ಯರೆ ಉತ್ತರ ಹೇಳಬೇಕು ಎಂದರು.
ಕೆಆರ್‍ಎಸ್, ಹೇಮಾವತಿ, ಕಬಿನಿ ಜಲಾಶಯಗಳಲ್ಲಿ ಫೆ.14ರವರೆಗೆ 29.086 ಟಿಎಂಸಿ ನೀರು ಲಭ್ಯ ಇದೆ. ನೀರಿನ ಕೊರತೆ ಇಲ್ಲ. ಹಾಗಾಗಿ ಜಲಾನಯನ ಪ್ರದೇಶ್ ಎಲ್ಲಾ ಭಾಗಗಳಿಗೂ ನೀರು ಪೂರೈಸಲಾಗುವುದು ಎಂದು ಹೇಳಿದರು.
ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿಗೆ ಹೇಮಾವತಿ ನದಿಯಿಂದ ನಾಲೆಯ ಮೂಲಕ ಕೆರೆಗಳಿಗೆ ನೀರನ್ನು ಹರಿಸುವ ಕಾಮಗಾರಿಯನ್ನು ಇದೇ ವರ್ಷದ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಸದಸ್ಯ ಅ.ದೇವೇಗೌಡರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಶಿವಮೊಗ್ಗ ಜಿಲ್ಲೆಯ ತುಂಗಾ ನದಿಯಿಂದ ಶಿವಮೊಗ್ಗ ಗ್ರಾಮಾಂತರ ಪ್ರದೇಶದ ಕೆರೆಗಳಿಗೆ ನೀರು ಪೂರೈಸುವ ಏತ ನೀರಾವರಿ ಯೋಜನೆಗಳ ಅಂದಾಜು ವೆಚ್ಚವನ್ನು ಹೆಚ್ಚಿಸಿದ್ದೇಕೆ ಎಂದು ಸದಸ್ಯ ಮಂಜುನಾಥ್ ಭಂಡಾರಿ ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಹೆಚ್ಚುವರಿ ತೆರಿಗೆ ಹೊರೆ, ಪೈಪ್ ಲೈನ್ ಬದಲಾವಣೆ ಕಾಮಗಾರಿಗಳು ಹೊಸದಾಗಿ ಸೇರ್ಪಡೆಯಾಗಿದ್ದರಿಂದ ಯೋಜನಾ ವೆಚ್ಚವನ್ನು ಪರಿಷ್ಕರಿಸಲಾಗಿದೆ. ಆ ವೇಳೆ ಮೂಲ ಯೋಜನಾ ವರದಿಯ ಮೊತ್ತಕ್ಕೆ ಶೇ.25.07ರಷ್ಟು ಪ್ರಮಾಣದ ಒಳಗಿರುವಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಮುರನೇ ಹಂತದ ಕಾಮಗಾರಿಗೆ ಮುಳುಗಡೆಯಾಗುವ ಗ್ರಾಮಗಳ ಪುನರ್ ವಸತಿಗೆ ಕೈಗೊಂಡ ಕ್ರಮಗಳ ಕುರಿತು ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 20 ಗ್ರಾಮಗಳು ಮುಳುಗಡೆಯಾಗಲಿವೆ. ಅವುಗಳ ಪೈಕಿ ಎಂಟು ಗ್ರಾಮಗಲ ಪುನರ್ ವಸತಿಗೆ ಕೇಂದ್ರಗಳನ್ನು ಗುರುತಿಸಲಾಗಿದೆ. ಇನ್ನೂ 12 ಗ್ರಾಮಗಳಿಗೆ ಸ್ಥಳ ಗುರುತಿಸಬೇಕಿದೆ ಎಂದು ವಿವರಿಸಿದರು.
ಕೃಷ್ಣಾ ನದಿ ವಿವಾದ ಕುರಿತ ನ್ಯಾಯಾಧೀಕರಣ ನೀಡಿರುವ ತೀರ್ಪು ಇನ್ನೂ ಅಧಿಸೂಚನೆ ಜಾರಿಯಾಗಿಲ್ಲ. ಈ ಹಂತದಲ್ಲಿ ಎಷ್ಟು ಪ್ರದೇಶಕ್ಕೆ ನೀರು ಪೂರೈಸಲಾಗುವುದು ಎಂದು ಸ್ಪಷ್ಟವಾಗಿ ಹೇಳುವುದು ಸಾಧ್ಯವಿಲ್ಲ. ಆದರೂ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ನ್ಯಾಯಾಧೀಕರಣದ ತೀರ್ಪನ್ನು ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಏರಲಾಗುವುದು ಎಂದರು.
ಪುನರ್ವಸತಿ ಯೋಜನೆಗೆ ಪರಿಹಾರ ನೀಡಲು ತಾರತಮ್ಯ ಇತ್ತು. ಕೃಷ್ಣ ಮೇಲ್ದಂಡೆಗೆ ಸೀಮಿತವಾಗಿ ಏಕರೂಪದ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಅದೇ ಮಾದರಿಯನ್ನು ಎತ್ತಿನಹೊಳೆ ಯೋಜನೆಗೆ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

10 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago