ಬೆಂಗಳೂರು: ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸತು. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ, ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ ಎಂದರು.
ಪೌತಿಖಾತೆಗೆ ಅರ್ಜಿ ಸಲ್ಲಿಸಿದ್ದ 17 ಕುಟುಂಬಗಳಿಗೆ ಸಚಿವರು ಆಸ್ತಿಖಾತೆ ದಾಖಲೆಗಳನ್ನು ವಿತರಿಸಿದರು. ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…