ಕೃಷಿ

ಮನೆ ಬಾಗಿಲಿಗೆ ಪೌತಿಖಾತೆ ಹಕ್ಕು: ಆರ್.ಅಶೋಕ್

ಪೌತಿ ಖಾತೆದಾರರಿಗೆ ಕಿಸಾನ್ ಸಮ್ಮಾನ್‌  ಆರ್ಥಿಕ ಸೌಲಭ್ಯಗಳು

ಬೆಂಗಳೂರು: ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್‌  ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು,
ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸತು. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ, ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ ಎಂದರು.

ಯಾವುದೇ ಅನಗತ್ಯ ತಂಟೆ, ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರು ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದು ಹೇಳಿದರು.

ಪೌತಿಖಾತೆಗೆ ಅರ್ಜಿ ಸಲ್ಲಿಸಿದ್ದ 17 ಕುಟುಂಬಗಳಿಗೆ ಸಚಿವರು ಆಸ್ತಿಖಾತೆ ದಾಖಲೆಗಳನ್ನು ವಿತರಿಸಿದರು. ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

10 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

10 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

10 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

11 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

11 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

11 hours ago