ಕೃಷಿ

ರಸ್ತೆಯಲ್ಲಿ ಅಡ್ಡಾಡುವ ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ಬಿಡಿ : ಪ್ರಭು ಬಿ.ಚವ್ಹಾಣ್ ಮನವಿ

ಬೆಂಗಳೂರು- ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆಯಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಬಿಡಾಡಿ ದನಗಳನ್ನು ನಿಯಂತ್ರಿಸುವ ಸಲುವಾಗಿ ಅವುಗಳನ್ನು ರಕ್ಷಣೆ ಮಾಡಿ ಸಮೀಪದ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಿಗೆ ತಂದು ಬಿಡುವಂತೆ ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರು ಸ್ಥಳೀಯ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಹೋಬಳಿ ಕೇಂದ್ರಗಳು, ಗ್ರಾಮ ಪಂಚಾಯತ್ ಪ್ರದೇಶ ಸೇರಿದಂತೆ ಪ್ರಮುಖ ಪಟ್ಟಣಗಳ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳು ನಿತ್ಯ ಕಂಡು ಬರುತ್ತಿರುವುದರಿಂದ ಸುಗಮ ಸಂಚಾರಕ್ಕೆ ಅನಾನುಕೂಲವಾಗುತ್ತಿದೆ ಎಂದು ಸಾಕಷ್ಟು ದೂರುಗಳು ಬರುತ್ತಿರುವುದರಿಂದ ಬಿಡಾಡಿ ದನಗಳಿಗೆ ಕಡಿವಾಣ ಹಾಕಲು ಸ್ಥಳೀಯ ಸಂಸ್ಥೆಗಳು ಮುಂದಾಗಬೇಕಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 74000ಕ್ಕೂ ಹೆಚ್ಚು ಬಿಡಾಡಿ ದನಗಳಿವೆ ಎಂದು ನಗರಾಭಿವೃದ್ಧಿ ಇಲಾಖೆ ಮಾಹಿತಿ ನೀಡಿದ್ದು, ರಸ್ತೆ ಮೇಲೆ ದನಗಳನ್ನು ಬಿಡುವ ಮಾಲೀಕರನ್ನು ಗುರುತಿಸಿ ಎಚ್ಚರಿಕೆ ನೀಡಲಾಗಿದೆಯಾದರೂ ಬಿಡಾಡಿ ದನಗಳು ಮತ್ತು ಎಮ್ಮೆಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕ ಪರಿಸರದಲ್ಲಿ ಅಲೆದಾಡುತ್ತಿವೆ ಎಂದು ತಿಳಿದುಬಂದಿದೆ. ಜಾನುವಾರುಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದಾಗಿರುತ್ತದೆ ಎಂದು ಪ್ರಭು ಬಿ.ಚವ್ಹಾಣ್ ವಿವರಿಸಿದ್ದಾರೆ.

ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳ ಮಾಲೀಕರು ಎಮ್ಮೆ, ಹಸುಗಳ ಹಾಲು ಹಿಂಡಿಕೊಂಡು ಬೀದಿಗೆ ಅಟ್ಟುವ ಪ್ರವೃತ್ತಿ ಮತ್ತೆ ಹೆಚ್ಚುತ್ತಿರುವುದನ್ನು ತಡೆಗಟ್ಟಲು ಹಾಗೂ ಸಂಭವಿಸುವ ಅಪಘಾತಗಳಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಗಾಯಗಳಾಗಿ ಮೃತಪಡುವುದನ್ನು ತಡೆಗಟ್ಟಲು ಬಿಡಾಡಿ ದನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಪ್ರಭು ಚವ್ಹಾಣ್ ಸ್ವಷ್ಟಪಡಿಸಿದ್ದಾರೆ.

ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ರಸ್ತೆ ಮೇಲೆ ದನಗಳು ಕಂಡು ಬಂದರೆ ತಕ್ಷಣ ಸಮೀಪದ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗೆ ಸ್ಥಳೀಯ ಸಂಸ್ಥೆಗಳು ತಂದು ಬಿಡಬೇಕು ಎಂದು ಸೂಚನೆ ನೀಡಲಾಗಿದೆ. ಈ ಮೂಲಕ ರಸ್ತೆ ಮಧ್ಯೆ ನಿಲ್ಲುವ ಅಥವಾ ರಸ್ತೆ ಬದಿ ಮೇಯುತ್ತಾ ಅಪಘಾತಕ್ಕೀಡಾಗಿ ಸಾವನ್ನಪ್ಪುವ ರಾಸುಗಳನ್ನು ರಕ್ಷಣೆ ಮಾಡಿ, ಅವುಗಳ ಪಾಲನೆ, ಪೋಷಣೆ ಮಾಡುವುದು ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ, ಸಾರ್ವಜನಿಕರನ್ನು ರಕ್ಷಣೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ: ಸಾರ್ವಜನಿಕ ರಸ್ತೆಗಳಲ್ಲಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಬಿಡಾಡಿ ದನಗಳು ಕಂಡು ಬಂದರೆ ಕೂಡಲೇ ಸಾರ್ವಜನಿಕರು ಪ್ರಾಣಿ ಕಲ್ಯಾಣ ಸಹಾಯವಾಣಿ ಸಂಖ್ಯೆ 8277100200 ಅಥವಾ ಸ್ಥಳೀಯ ಸಂಸ್ಥೆಗಳ ಸಹಾಯವಾಣಿಗಳಿಗೆ ಕರೆ ಮಾಡಿ, ಈ ಬಗ್ಗೆ ದೂರು ನೀಡಿದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಬಿಡಾಡಿ ದನಗಳನ್ನು ಸಮೀಪದ ಗೋಶಾಲೆಗಳಿಗೆ ತಂದುಬಿಡುವ ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕರು ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ತಂದುಬಿಡುವಂತೆ ಸಚಿವ ಪ್ರಭು ಚವ್ಹಾಣ್ ಮನವಿ ಮಾಡಿದ್ದಾರೆ.

ನೋಂದಣಿಗೆ ಕ್ರಮ:
ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಿಗೆ ತಂದು ಬಿಡುವ ಬಿಡಾಡಿ ದನಗಳ ಆರೈಕೆ, ಪಾಲನೆ ಮತ್ತು ಪೋಷಣೆ ಜತೆಗೆ ಪ್ರತಿಯೊಂದನ್ನು ಆನ್.ಲೈನ್ ಪೋರ್ಟಲ್.ನಲ್ಲಿ ನೋಂದಣಿ ಮಾಡಬೇಕು ಎಂದು ಸಚಿವ ಪ್ರಭು ಚವ್ಹಾಣ್ ಅವರು ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

andolanait

Share
Published by
andolanait

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

4 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

4 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

5 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

5 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

5 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

5 hours ago