ಕೃಷಿ

ರಸ್ತೆಯಲ್ಲಿ ಅಡ್ಡಾಡುವ ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ಬಿಡಿ : ಪ್ರಭು ಬಿ.ಚವ್ಹಾಣ್ ಮನವಿ

ಬೆಂಗಳೂರು- ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆಯಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಬಿಡಾಡಿ ದನಗಳನ್ನು ನಿಯಂತ್ರಿಸುವ ಸಲುವಾಗಿ ಅವುಗಳನ್ನು ರಕ್ಷಣೆ ಮಾಡಿ ಸಮೀಪದ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಿಗೆ ತಂದು ಬಿಡುವಂತೆ ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರು ಸ್ಥಳೀಯ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಹೋಬಳಿ ಕೇಂದ್ರಗಳು, ಗ್ರಾಮ ಪಂಚಾಯತ್ ಪ್ರದೇಶ ಸೇರಿದಂತೆ ಪ್ರಮುಖ ಪಟ್ಟಣಗಳ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳು ನಿತ್ಯ ಕಂಡು ಬರುತ್ತಿರುವುದರಿಂದ ಸುಗಮ ಸಂಚಾರಕ್ಕೆ ಅನಾನುಕೂಲವಾಗುತ್ತಿದೆ ಎಂದು ಸಾಕಷ್ಟು ದೂರುಗಳು ಬರುತ್ತಿರುವುದರಿಂದ ಬಿಡಾಡಿ ದನಗಳಿಗೆ ಕಡಿವಾಣ ಹಾಕಲು ಸ್ಥಳೀಯ ಸಂಸ್ಥೆಗಳು ಮುಂದಾಗಬೇಕಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 74000ಕ್ಕೂ ಹೆಚ್ಚು ಬಿಡಾಡಿ ದನಗಳಿವೆ ಎಂದು ನಗರಾಭಿವೃದ್ಧಿ ಇಲಾಖೆ ಮಾಹಿತಿ ನೀಡಿದ್ದು, ರಸ್ತೆ ಮೇಲೆ ದನಗಳನ್ನು ಬಿಡುವ ಮಾಲೀಕರನ್ನು ಗುರುತಿಸಿ ಎಚ್ಚರಿಕೆ ನೀಡಲಾಗಿದೆಯಾದರೂ ಬಿಡಾಡಿ ದನಗಳು ಮತ್ತು ಎಮ್ಮೆಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕ ಪರಿಸರದಲ್ಲಿ ಅಲೆದಾಡುತ್ತಿವೆ ಎಂದು ತಿಳಿದುಬಂದಿದೆ. ಜಾನುವಾರುಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದಾಗಿರುತ್ತದೆ ಎಂದು ಪ್ರಭು ಬಿ.ಚವ್ಹಾಣ್ ವಿವರಿಸಿದ್ದಾರೆ.

ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳ ಮಾಲೀಕರು ಎಮ್ಮೆ, ಹಸುಗಳ ಹಾಲು ಹಿಂಡಿಕೊಂಡು ಬೀದಿಗೆ ಅಟ್ಟುವ ಪ್ರವೃತ್ತಿ ಮತ್ತೆ ಹೆಚ್ಚುತ್ತಿರುವುದನ್ನು ತಡೆಗಟ್ಟಲು ಹಾಗೂ ಸಂಭವಿಸುವ ಅಪಘಾತಗಳಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಗಾಯಗಳಾಗಿ ಮೃತಪಡುವುದನ್ನು ತಡೆಗಟ್ಟಲು ಬಿಡಾಡಿ ದನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಪ್ರಭು ಚವ್ಹಾಣ್ ಸ್ವಷ್ಟಪಡಿಸಿದ್ದಾರೆ.

ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ರಸ್ತೆ ಮೇಲೆ ದನಗಳು ಕಂಡು ಬಂದರೆ ತಕ್ಷಣ ಸಮೀಪದ ಸರ್ಕಾರಿ ಮತ್ತು ಖಾಸಗಿ ಗೋಶಾಲೆಗೆ ಸ್ಥಳೀಯ ಸಂಸ್ಥೆಗಳು ತಂದು ಬಿಡಬೇಕು ಎಂದು ಸೂಚನೆ ನೀಡಲಾಗಿದೆ. ಈ ಮೂಲಕ ರಸ್ತೆ ಮಧ್ಯೆ ನಿಲ್ಲುವ ಅಥವಾ ರಸ್ತೆ ಬದಿ ಮೇಯುತ್ತಾ ಅಪಘಾತಕ್ಕೀಡಾಗಿ ಸಾವನ್ನಪ್ಪುವ ರಾಸುಗಳನ್ನು ರಕ್ಷಣೆ ಮಾಡಿ, ಅವುಗಳ ಪಾಲನೆ, ಪೋಷಣೆ ಮಾಡುವುದು ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ, ಸಾರ್ವಜನಿಕರನ್ನು ರಕ್ಷಣೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ: ಸಾರ್ವಜನಿಕ ರಸ್ತೆಗಳಲ್ಲಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಬಿಡಾಡಿ ದನಗಳು ಕಂಡು ಬಂದರೆ ಕೂಡಲೇ ಸಾರ್ವಜನಿಕರು ಪ್ರಾಣಿ ಕಲ್ಯಾಣ ಸಹಾಯವಾಣಿ ಸಂಖ್ಯೆ 8277100200 ಅಥವಾ ಸ್ಥಳೀಯ ಸಂಸ್ಥೆಗಳ ಸಹಾಯವಾಣಿಗಳಿಗೆ ಕರೆ ಮಾಡಿ, ಈ ಬಗ್ಗೆ ದೂರು ನೀಡಿದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಬಿಡಾಡಿ ದನಗಳನ್ನು ಸಮೀಪದ ಗೋಶಾಲೆಗಳಿಗೆ ತಂದುಬಿಡುವ ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕರು ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ತಂದುಬಿಡುವಂತೆ ಸಚಿವ ಪ್ರಭು ಚವ್ಹಾಣ್ ಮನವಿ ಮಾಡಿದ್ದಾರೆ.

ನೋಂದಣಿಗೆ ಕ್ರಮ:
ಸರ್ಕಾರಿ ಮತ್ತು ಖಾಸಗಿ ಗೋಶಾಲೆಗಳಿಗೆ ತಂದು ಬಿಡುವ ಬಿಡಾಡಿ ದನಗಳ ಆರೈಕೆ, ಪಾಲನೆ ಮತ್ತು ಪೋಷಣೆ ಜತೆಗೆ ಪ್ರತಿಯೊಂದನ್ನು ಆನ್.ಲೈನ್ ಪೋರ್ಟಲ್.ನಲ್ಲಿ ನೋಂದಣಿ ಮಾಡಬೇಕು ಎಂದು ಸಚಿವ ಪ್ರಭು ಚವ್ಹಾಣ್ ಅವರು ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

andolanait

Share
Published by
andolanait

Recent Posts

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

22 mins ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

4 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

4 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

14 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

18 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

19 hours ago