ಕೃಷಿ

ರಾಜ್ಯದಲ್ಲಿ ಜಿಟಿ ಜಿಟಿ ಮಳೆ : ಸದ್ಯಕ್ಕಿಲ್ಲ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು :  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.
ಬೆಳಗ್ಗೆ ಆರಂಭವಾದ ತುಂತುರು ಮಳೆ ಆಗಾಗ್ಗೆ ಬರುತ್ತಲೇ ಇದ್ದು, ಇಂದು ಬೆಳಗ್ಗೆ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜಿಟಿ ಜಿಟಿ ಮಳೆ ಮುಂದುವರೆದಿದೆ. ಆದರೆ, ಭಾರೀ ಮಳೆಯಾದ ವರದಿಯಾಗಿಲ್ಲ. ಭಾರೀ ಮಳೆಯಾಗುವ ಮುನ್ಸೂಚನೆಗಳು ಸದ್ಯಕ್ಕೆ ಕಂಡುಬರುತ್ತಿಲ್ಲ.
ಅಲ್ಲದೆ, ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುತ್ತಿರುವುದರಿಂದ ತೀವ್ರವಾದ ಚಳಿಯ ಅನುಭವವಾಗುತ್ತಿದೆ. ಮತ್ತೆ ಮಳೆ ಆರಂಭವಾಗಿರುವುದರಿಂದ ದೈನಂದಿನ ಕೆಲಸ-ಕಾರ್ಯಗಳಿಗೆ ತೆರಳುವವರು ಕೊಡೆ, ರೈನ್‍ಕೋಟ್‍ಗಳ ಮೊರೆ ಹೋಗಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿ ಕಂಡುಬಂದಿತು.
ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸಹ ಜಿನುಗುವ ಮಳೆಯಲ್ಲೇ ಕೊಡೆ ಮತ್ತು ರೈನ್‍ಕೋಟ್‍ಗಳನ್ನು ಧರಿಸಿ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಎಡಬಿಡದೆ ನಿರಂತರವಾಗಿ ಬೀಳುತ್ತಿರುವ ಜಿಟಿ ಜಿಟಿ ಮಳೆಯಿಂದ ದೈನಂದಿನ ಕೆಲಸ-ಕಾರ್ಯಗಳಿಗೆ ಅಡ್ಡಿಯಾಗಿತ್ತು.
ಗ್ರಾಮೀಣ ಭಾಗದಲ್ಲೂ ಜಿಟಿ ಜಿಟಿ ಮಳೆಯಿಂದ ಕೃಷಿ ಕಾರ್ಯಗಳಿಗೆ ತೊಂದರೆಯಾಗಿ ಬಿಡುವು ಕೊಟ್ಟರೆ ಸಾಕು ಎಂಬ ಮನಸ್ಥಿತಿಯಲ್ಲಿ ಜನರಿದ್ದಾರೆ.  ಹವಾಮಾನ ಮುನ್ಸೂಚನೆ ಪ್ರಕಾರ, ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ವಾಯುಭಾರ ಕುಸಿತದಿಂದ ತಮಿಳುನಾಡಿನಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರ ಮಳೆಯಾದ ವರದಿಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಇಲ್ಲವೆ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ.
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೆಡೆ ಹಗುರ ಮಳೆಯನ್ನು ನಿರೀಕ್ಷಿಸಬಹುದಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲೂ ಸಾಧಾರಣ ಪ್ರಮಾಣದ ಮಳೆ ಕೆಲವೆಡೆ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ನಿನ್ನೆಯಿಂದ ಮತ್ತೆ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಪೂರ್ವಭಾಗದ ಜಿಲ್ಲೆಗಳಲ್ಲಿ ಕೆಲವೆಡೆ ತುಂತುರು ಮಳೆ, ಮತ್ತೆ ಕೆಲವೆಡೆ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

andolanait

Share
Published by
andolanait

Recent Posts

ತಗ್ಗದ ಗ್ಯಾಸ್ ಟ್ರಬಲ್; ಕೈಸುಡುತ್ತಿದೆ ತಿಂಡಿ ಬಿಲ್!

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…

1 min ago

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್

೮ ಗಂಟೆ ಮೊದಲು ಟಿಕೆಟ್ ರದ್ದಾಗದಿದ್ದರೆ ಸಂಪೂರ್ಣ ಹಣ ಖೋತಾ ಹೊಸದಿಲ್ಲಿ: ರೈಲು ಪ್ರಯಾಣ ಆರಂಭವಾಗುವ ೮ ಗಂಟೆ ಮೊದಲು…

8 mins ago

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

10 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

10 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

10 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

10 hours ago