ಕೃಷಿ

ರಾಜ್ಯದಲ್ಲಿ ಜಿಟಿ ಜಿಟಿ ಮಳೆ : ಸದ್ಯಕ್ಕಿಲ್ಲ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು :  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.
ಬೆಳಗ್ಗೆ ಆರಂಭವಾದ ತುಂತುರು ಮಳೆ ಆಗಾಗ್ಗೆ ಬರುತ್ತಲೇ ಇದ್ದು, ಇಂದು ಬೆಳಗ್ಗೆ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜಿಟಿ ಜಿಟಿ ಮಳೆ ಮುಂದುವರೆದಿದೆ. ಆದರೆ, ಭಾರೀ ಮಳೆಯಾದ ವರದಿಯಾಗಿಲ್ಲ. ಭಾರೀ ಮಳೆಯಾಗುವ ಮುನ್ಸೂಚನೆಗಳು ಸದ್ಯಕ್ಕೆ ಕಂಡುಬರುತ್ತಿಲ್ಲ.
ಅಲ್ಲದೆ, ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುತ್ತಿರುವುದರಿಂದ ತೀವ್ರವಾದ ಚಳಿಯ ಅನುಭವವಾಗುತ್ತಿದೆ. ಮತ್ತೆ ಮಳೆ ಆರಂಭವಾಗಿರುವುದರಿಂದ ದೈನಂದಿನ ಕೆಲಸ-ಕಾರ್ಯಗಳಿಗೆ ತೆರಳುವವರು ಕೊಡೆ, ರೈನ್‍ಕೋಟ್‍ಗಳ ಮೊರೆ ಹೋಗಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿ ಕಂಡುಬಂದಿತು.
ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸಹ ಜಿನುಗುವ ಮಳೆಯಲ್ಲೇ ಕೊಡೆ ಮತ್ತು ರೈನ್‍ಕೋಟ್‍ಗಳನ್ನು ಧರಿಸಿ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಎಡಬಿಡದೆ ನಿರಂತರವಾಗಿ ಬೀಳುತ್ತಿರುವ ಜಿಟಿ ಜಿಟಿ ಮಳೆಯಿಂದ ದೈನಂದಿನ ಕೆಲಸ-ಕಾರ್ಯಗಳಿಗೆ ಅಡ್ಡಿಯಾಗಿತ್ತು.
ಗ್ರಾಮೀಣ ಭಾಗದಲ್ಲೂ ಜಿಟಿ ಜಿಟಿ ಮಳೆಯಿಂದ ಕೃಷಿ ಕಾರ್ಯಗಳಿಗೆ ತೊಂದರೆಯಾಗಿ ಬಿಡುವು ಕೊಟ್ಟರೆ ಸಾಕು ಎಂಬ ಮನಸ್ಥಿತಿಯಲ್ಲಿ ಜನರಿದ್ದಾರೆ.  ಹವಾಮಾನ ಮುನ್ಸೂಚನೆ ಪ್ರಕಾರ, ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ವಾಯುಭಾರ ಕುಸಿತದಿಂದ ತಮಿಳುನಾಡಿನಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರ ಮಳೆಯಾದ ವರದಿಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಇಲ್ಲವೆ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ.
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೆಡೆ ಹಗುರ ಮಳೆಯನ್ನು ನಿರೀಕ್ಷಿಸಬಹುದಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲೂ ಸಾಧಾರಣ ಪ್ರಮಾಣದ ಮಳೆ ಕೆಲವೆಡೆ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ನಿನ್ನೆಯಿಂದ ಮತ್ತೆ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಪೂರ್ವಭಾಗದ ಜಿಲ್ಲೆಗಳಲ್ಲಿ ಕೆಲವೆಡೆ ತುಂತುರು ಮಳೆ, ಮತ್ತೆ ಕೆಲವೆಡೆ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

andolanait

Share
Published by
andolanait

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

3 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

3 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

4 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

5 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

5 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

5 hours ago