ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ಸ್ವರೂಪದ ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಾಡಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ.
ಕಳೆದ ಎಂಟು ಹತ್ತು ದಿನಗಳಿಂದ ಮಳೆ ಬಿಡುವು ಕೊಟ್ಟಿದ್ದು, ಒಣ ಹವೆ ಮುಂದುವರೆದಿತ್ತು. ಆದರೂ ಚಳಿಯ ತೀವ್ರತೆ ಅಷ್ಟಾಗಿ ಕಂಡು ಬರುತ್ತಿಲ್ಲ. ಚಂಡಮಾರುತದ ಪರಿಣಾಮದಿಂದ ನಾಳೆಯಿಂದ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಡಿ.೯ರಿಂದ ೧೨ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ರಾಜ್ಯದ ದಕ್ಷಿಣ ಭಾಗದ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು, ರಾಮನಗರ, ಬೆಂಗಳೂರು, ಪೂರ್ವಭಾಗದ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಚದುರಿದಂತೆ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕರಾದ ವಿ.ಎಸ್.ಪ್ರಕಾಶ್ ಪ್ರಕಾರ, ವಾಯುಭಾರ ಕುಸಿತವು ಬುಧವಾರ ಸಂಜೆ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರಿಂದ ಆಂಧ್ರಪದ್ರದೇಶ, ಪಾಂಡಿಚೆರಿ ಹಾಗೂ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ಆದರೆ, ಇದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದ್ದು, ಹಗುರದಿಂದ ಸಾಧಾರಣ ಪ್ರವಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಆದರೆ, ಈ ಚಂಡ ಮಾರುತವು ಪ್ರಬಲವಾಗುವ ಲಕ್ಷಣಗಳಿಲ್ಲ. ಒಂದೆರದು ದಿನದಲ್ಲಿ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ಭೂಸ್ಪರ್ಶವಾಗಿ ತನ್ನ ಸಾಮಥ್ರ್ಯ ಕಳೆದುಕೊಂಡು ದುರ್ಬಲವಾಗಲಿದೆ. ಬಳಿಕ ಕರ್ನಾಟಕದ ಮೂಲಕ ಹಾದು ಹೋಗಿ ಅರಬ್ಬೀ ಸಮುದ್ರ ತಲುಪುವ ನಿರೀಕ್ಷೆ ಇದೆ. ಹೀಗಾಗಿ ಮೋಡಗಳ ಸಾಲು ಹಾದುಹೋಗುವ ಮಾರ್ಗದಲ್ಲಿ ಮಳೆಯಾಗಲಿದೆ ಎಂದಿದ್ದಾರೆ.
ಡಿ.೧೩-೧೪ರಂದು ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರ ಮಳೆಯಾಗುವು ಸಂಭವವಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…