ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ಸ್ವರೂಪದ ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಾಡಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ.
ಕಳೆದ ಎಂಟು ಹತ್ತು ದಿನಗಳಿಂದ ಮಳೆ ಬಿಡುವು ಕೊಟ್ಟಿದ್ದು, ಒಣ ಹವೆ ಮುಂದುವರೆದಿತ್ತು. ಆದರೂ ಚಳಿಯ ತೀವ್ರತೆ ಅಷ್ಟಾಗಿ ಕಂಡು ಬರುತ್ತಿಲ್ಲ. ಚಂಡಮಾರುತದ ಪರಿಣಾಮದಿಂದ ನಾಳೆಯಿಂದ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಡಿ.೯ರಿಂದ ೧೨ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ರಾಜ್ಯದ ದಕ್ಷಿಣ ಭಾಗದ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು, ರಾಮನಗರ, ಬೆಂಗಳೂರು, ಪೂರ್ವಭಾಗದ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಚದುರಿದಂತೆ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕರಾದ ವಿ.ಎಸ್.ಪ್ರಕಾಶ್ ಪ್ರಕಾರ, ವಾಯುಭಾರ ಕುಸಿತವು ಬುಧವಾರ ಸಂಜೆ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರಿಂದ ಆಂಧ್ರಪದ್ರದೇಶ, ಪಾಂಡಿಚೆರಿ ಹಾಗೂ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ಆದರೆ, ಇದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದ್ದು, ಹಗುರದಿಂದ ಸಾಧಾರಣ ಪ್ರವಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಆದರೆ, ಈ ಚಂಡ ಮಾರುತವು ಪ್ರಬಲವಾಗುವ ಲಕ್ಷಣಗಳಿಲ್ಲ. ಒಂದೆರದು ದಿನದಲ್ಲಿ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ಭೂಸ್ಪರ್ಶವಾಗಿ ತನ್ನ ಸಾಮಥ್ರ್ಯ ಕಳೆದುಕೊಂಡು ದುರ್ಬಲವಾಗಲಿದೆ. ಬಳಿಕ ಕರ್ನಾಟಕದ ಮೂಲಕ ಹಾದು ಹೋಗಿ ಅರಬ್ಬೀ ಸಮುದ್ರ ತಲುಪುವ ನಿರೀಕ್ಷೆ ಇದೆ. ಹೀಗಾಗಿ ಮೋಡಗಳ ಸಾಲು ಹಾದುಹೋಗುವ ಮಾರ್ಗದಲ್ಲಿ ಮಳೆಯಾಗಲಿದೆ ಎಂದಿದ್ದಾರೆ.
ಡಿ.೧೩-೧೪ರಂದು ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರ ಮಳೆಯಾಗುವು ಸಂಭವವಿದೆ.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…