ಕೃಷಿ

ವಾಯುಭಾರ ಕುಸಿತ: ಮಳೆ ಸಂಭವ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ಸ್ವರೂಪದ ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಾಡಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ.
ಕಳೆದ ಎಂಟು ಹತ್ತು ದಿನಗಳಿಂದ ಮಳೆ ಬಿಡುವು ಕೊಟ್ಟಿದ್ದು, ಒಣ ಹವೆ ಮುಂದುವರೆದಿತ್ತು. ಆದರೂ ಚಳಿಯ ತೀವ್ರತೆ ಅಷ್ಟಾಗಿ ಕಂಡು ಬರುತ್ತಿಲ್ಲ. ಚಂಡಮಾರುತದ ಪರಿಣಾಮದಿಂದ ನಾಳೆಯಿಂದ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಡಿ.೯ರಿಂದ ೧೨ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ರಾಜ್ಯದ ದಕ್ಷಿಣ ಭಾಗದ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು, ರಾಮನಗರ, ಬೆಂಗಳೂರು, ಪೂರ್ವಭಾಗದ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಚದುರಿದಂತೆ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕರಾದ ವಿ.ಎಸ್.ಪ್ರಕಾಶ್ ಪ್ರಕಾರ, ವಾಯುಭಾರ ಕುಸಿತವು ಬುಧವಾರ ಸಂಜೆ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರಿಂದ ಆಂಧ್ರಪದ್ರದೇಶ, ಪಾಂಡಿಚೆರಿ ಹಾಗೂ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ಆದರೆ, ಇದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದ್ದು, ಹಗುರದಿಂದ ಸಾಧಾರಣ ಪ್ರವಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಆದರೆ, ಈ ಚಂಡ ಮಾರುತವು ಪ್ರಬಲವಾಗುವ ಲಕ್ಷಣಗಳಿಲ್ಲ. ಒಂದೆರದು ದಿನದಲ್ಲಿ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ಭೂಸ್ಪರ್ಶವಾಗಿ ತನ್ನ ಸಾಮಥ್ರ್ಯ ಕಳೆದುಕೊಂಡು ದುರ್ಬಲವಾಗಲಿದೆ. ಬಳಿಕ ಕರ್ನಾಟಕದ ಮೂಲಕ ಹಾದು ಹೋಗಿ ಅರಬ್ಬೀ ಸಮುದ್ರ ತಲುಪುವ ನಿರೀಕ್ಷೆ ಇದೆ. ಹೀಗಾಗಿ ಮೋಡಗಳ ಸಾಲು ಹಾದುಹೋಗುವ ಮಾರ್ಗದಲ್ಲಿ ಮಳೆಯಾಗಲಿದೆ ಎಂದಿದ್ದಾರೆ.
ಡಿ.೧೩-೧೪ರಂದು ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರ ಮಳೆಯಾಗುವು ಸಂಭವವಿದೆ.

andolanait

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

4 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

4 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

4 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

4 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

4 hours ago