ಕೃಷಿ

ಮೋಡ ಕವಿದ ವಾತಾವರಣ : ಮತ್ತೆ 5 ದಿನ ಮಳೆ ಸಾಧ್ಯತೆ

ಬೆಂಗಳೂರು– : ಕಳೆದ ಆ.21ರಿಂದ ಆರಂಭವಾದ ಮಳೆ ಬಹಳಷ್ಟು ಕಡೆ ಅವಾಂತರ ಸೃಷ್ಟಿಸಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ.
ಬಂಗಾಳ ಕೊಲ್ಲಿಯ ಶ್ರೀಲಂಕಾ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಒಡಿಸ್ಸಾವರೆಗೂ ಟ್ರಫ್ ನಿರ್ಮಾಣವಾಗಿರುವ ಪ್ರಭಾವದಿಂದಾಗಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದೆ.
ಕೆಲವೆಡೆ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಅಬ್ಬರ ತಗ್ಗಿದೆ. ಆದರೆ, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ
ಮಧ್ಯಾಹ್ನದಿಂದಲೂ ಮಳೆಯಾಗಿದೆ.ನಿರಂತರ ಮಳೆಯಿಂದಾಗಿ ಹಲವೆಡೆ ಅತಿವೃಷ್ಟಿ ಸೃಷ್ಟಿಯಾಗಿದೆ. ಸಾಕಷ್ಟು ಬೆಳೆ ಹಾನಿಯಾಗಿದ್ದು, ಮುಂಗಾರು ಹಂಗಾಮಿನ ಆಹಾರಧಾನ್ಯ ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ.
ನಿನ್ನೆ ಸಂಜೆ ಹಾಗೂ ರಾತ್ರಿ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಗದಗ, ಧಾರವಾಡ ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾದ ವರದಿಯಾಗಿದೆ.

ರಾಮನಗರ, ದಾವಣಗೆರೆ, ಹಾಸನ, ಚಿಕ್ಕ ಮಗಳೂರು, ಹಾಸನ, ಕೋಲಾರ, ಚಿಕ್ಕ ಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆ ಮುಂದುವರಿದೆ. ಉಳಿದಂತೆ ಸಾಧಾರಣ ಮಳೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಚುದುರಿದಂತೆ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಸೆ.5 ರಿಂದ 10ರ ವರೆಗೆ ಮತ್ತೊಂದು ಸುತ್ತು ರಾಜ್ಯದಲ್ಲಿ ಮಳೆಯಾಗಲಿದೆ. ಮುಂದಿನ 10 ದಿನಗಳಲ್ಲಿ ಸರಾಸರಿ 100 ಮಿಮೀವರೆಗೂ ಮಳೆಯಾಗುವ ಸಾಧ್ಯತೆಗಳಿವೆ ಬೆಂಗಳೂರು 111, ತುಮಕೂರು 127, ಕೋಲಾರ 87, ಚನ್ನಪಟ್ಟಣ 114, ಮಧುಗಿರಿ 108, ಹಿರಿಯೂರು 138, ಚಿತ್ರದುರ್ಗ 120, ಚಿಕ್ಕಮಗಳೂರು 138, ಮೈಸೂರು 95, ಎಚ್‍ಡಿ ಕೋಟೆ 103, ಉಡುಪಿ 210, ಕಾರವಾರ 191, ಬೀದರ್ 130, ರಾಯಚೂರು 90, ವಿಜಯಪುರ 123, ಯಾದಗಿರಿ 122, ಬಾಗಲಕೋಟೆ 100, ಕಲಬುರಗಿ 134, ಬೆಳಗಾವಿ 196, ಹುಬ್ಬಳ್ಳಿ 141, ಕೊಪ್ಪಳ 106, ಗದಗ 108, ಬಳ್ಳಾರಿ 71, ಶಿವಮೊಗ್ಗ 120, ಚಿಕ್ಕಮಗಳೂರು 130, ಶೃಂಗೇರಿ 221ಮಿಮೀ ವರೆಗೆ ಮುಂದಿನ 10 ದಿನಗಳಲ್ಲಿ ಒಟ್ಟಾರೆ ಸಂಚಿತ ಮಳೆಯಾಗಲಿದೆ.

andolanait

Recent Posts

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

45 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

5 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

6 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

12 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

12 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

12 hours ago