ಕೃಷಿ

ರಾಜ್ಯದಲ್ಲಿ ಮತ್ತೆ 2 ದಿನ ಜೋರು ಮಳೆ ಸಾಧ್ಯತೆ

ಬೆಂಗಳೂರು– ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಮಳೆ ಆರ್ಭಟ ಜೋರಾಗಿದ್ದು, ಇನ್ನೂ ಎರಡು ದಿನ ಮುಂದುವರಿಯುವ ಮುನ್ಸೂಚನೆಗಳಿವೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿ ಗಾಳಿ ಉಂಟಾಗಿದ್ದು, ಒಳನಾಡಿನಲ್ಲಿ ಟ್ರಫ್ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಕೆಲವೆಡೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುತ್ತಿದ್ದು, ಕೆಲವೆಡೆ ಭಾರೀ ಮಳೆಯು ಆಗಿದೆ. ಸೋಮವಾರ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾದ ವರದಿಯಾಗಿದ್ದು, ನಿನ್ನೆಯೂ ಕೂಡ ಕೆಲವೆಡೆ ಭಾರಿ ಮಳೆಯಾಗಿದೆ. ರಾಯಚೂರು, ಯಾದಗಿರಿ, ಕಲ್ಬುರ್ಗಿ, ವಿಜಯಪುರ, ಗದಗ, ಚಿತ್ರದುರ್ಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾದ ವರದಿಯಾಗಿದೆ.
ಉಳಿದಂತೆ ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆ ಬಹುತೇಕ ಕಡೆಗಳಲ್ಲಿ ಬಿದ್ದಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ನಾಳೆಯಿಂದ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಆದರೆ ಪೂರ್ಣವಾಗಿ ನಿಲ್ಲುವುದಿಲ್ಲ. ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆಯುತ್ತಲೇ ಇರುತ್ತದೆ. ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಹಾಗೂ ಈಶಾನ್ಯ ಹಿಂಗಾರು ಆರಂಭದ ನಡುವಿನ ಬರುವ ಕಾಲ ಇದಾಗಿದ್ದು, ಈ ಸಂದರ್ಭದಲ್ಲಿ ಮಳೆಯಾಗುವುದು ಸಹಜ ಪ್ರಕ್ರಿಯೆ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.
ಕಳೆದ ಎರಡು ವಾರದಿಂದ ಒಣಹವೆ ಕಂಡು ಬಂದಿದ್ದು, ವಿವಿಧ ಬೆಳೆಗಳಿಗೆ ಮಳೆಯ ಅಗತ್ಯವೂ ಇತ್ತು. ಹೀಗಾಗಿ ರೈತ ಸಮುದಾಯಕ್ಕೆ ಈ ಮಳೆಯಿಂದ ಅನುಕೂಲಕರವಾಗಿವೆ. ಕೆಲವು ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳನ್ನು ಸೃಷ್ಟಿಸಿವೆ.
ದಾವಣಗೆರೆ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸಾಕಷ್ಟು ಮಳೆಯಾಗಿದ್ದು, ಕೆಲವು ಕೆರೆಗಳು ಕೂಡಿ ಬಿದ್ದಿದ್ದರೆ ಹಲವು ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿವೆ. ತಾಲೂಕಿನ ಅಣಜಿಕೆರೆ 40 ವರ್ಷಗಳ ಬಳಿಕ ಭರ್ತಿಯಾಗಿದೆ. ಮಲ್ಪೆ, ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ಸಂಪರ್ಕ ಅಸ್ತವ್ಯಸ್ತವಾಗಿದೆ.
ದಾವಣಗೆರೆ ತಾಲ್ಲೂಕಿನ ಗುಮ್ಮನೂರು, ಮಡ್ಲೂರು, ಅಣಜಿ ಸೇರಿದಂತೆ ಕೆಲವು ಗ್ರಾಮಗಳಿಗೆ ನೀರು ನುಗ್ಗಿದೆ. ಕೆರೆಯಾಗಳ ಹಳ್ಳಿಯಲ್ಲಿ ಕೋಳಿ ಫಾರಂಗೂ ನೀರು ನುಗ್ಗಿ ಧಾರವಾಡದಲ್ಲಿ ಸಾಕಷ್ಟು ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದ ತಗ್ಗು ಪ್ರದೇಶದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ಸಾಕಷ್ಟು ಹಾನಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಕೆರೆಗಳು ಭರ್ತಿಯಾಗಿ ಕೋಡಿಬಿದ್ದಿವೆ.
ಹೀಗೆ ಬಹಳಷ್ಟು ಕಡೆ ಉತ್ತಮ ಮಳೆಯಾಗಿದ್ದು, ಜನರಿಗೆ ಸಾಕಷ್ಟು ತೊಂದರೆ ಉಂಟಾದ ವರದಿಯಾಗಿದೆ.

andolanait

Share
Published by
andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

7 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

8 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

8 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

9 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

10 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

10 hours ago