ಕೃಷಿ

ರಾಜ್ಯದಲ್ಲಿ ಮತ್ತೆ 2 ದಿನ ಜೋರು ಮಳೆ ಸಾಧ್ಯತೆ

ಬೆಂಗಳೂರು– ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಮಳೆ ಆರ್ಭಟ ಜೋರಾಗಿದ್ದು, ಇನ್ನೂ ಎರಡು ದಿನ ಮುಂದುವರಿಯುವ ಮುನ್ಸೂಚನೆಗಳಿವೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿ ಗಾಳಿ ಉಂಟಾಗಿದ್ದು, ಒಳನಾಡಿನಲ್ಲಿ ಟ್ರಫ್ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಕೆಲವೆಡೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುತ್ತಿದ್ದು, ಕೆಲವೆಡೆ ಭಾರೀ ಮಳೆಯು ಆಗಿದೆ. ಸೋಮವಾರ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾದ ವರದಿಯಾಗಿದ್ದು, ನಿನ್ನೆಯೂ ಕೂಡ ಕೆಲವೆಡೆ ಭಾರಿ ಮಳೆಯಾಗಿದೆ. ರಾಯಚೂರು, ಯಾದಗಿರಿ, ಕಲ್ಬುರ್ಗಿ, ವಿಜಯಪುರ, ಗದಗ, ಚಿತ್ರದುರ್ಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾದ ವರದಿಯಾಗಿದೆ.
ಉಳಿದಂತೆ ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆ ಬಹುತೇಕ ಕಡೆಗಳಲ್ಲಿ ಬಿದ್ದಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ನಾಳೆಯಿಂದ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಆದರೆ ಪೂರ್ಣವಾಗಿ ನಿಲ್ಲುವುದಿಲ್ಲ. ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆಯುತ್ತಲೇ ಇರುತ್ತದೆ. ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಹಾಗೂ ಈಶಾನ್ಯ ಹಿಂಗಾರು ಆರಂಭದ ನಡುವಿನ ಬರುವ ಕಾಲ ಇದಾಗಿದ್ದು, ಈ ಸಂದರ್ಭದಲ್ಲಿ ಮಳೆಯಾಗುವುದು ಸಹಜ ಪ್ರಕ್ರಿಯೆ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.
ಕಳೆದ ಎರಡು ವಾರದಿಂದ ಒಣಹವೆ ಕಂಡು ಬಂದಿದ್ದು, ವಿವಿಧ ಬೆಳೆಗಳಿಗೆ ಮಳೆಯ ಅಗತ್ಯವೂ ಇತ್ತು. ಹೀಗಾಗಿ ರೈತ ಸಮುದಾಯಕ್ಕೆ ಈ ಮಳೆಯಿಂದ ಅನುಕೂಲಕರವಾಗಿವೆ. ಕೆಲವು ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳನ್ನು ಸೃಷ್ಟಿಸಿವೆ.
ದಾವಣಗೆರೆ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸಾಕಷ್ಟು ಮಳೆಯಾಗಿದ್ದು, ಕೆಲವು ಕೆರೆಗಳು ಕೂಡಿ ಬಿದ್ದಿದ್ದರೆ ಹಲವು ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿವೆ. ತಾಲೂಕಿನ ಅಣಜಿಕೆರೆ 40 ವರ್ಷಗಳ ಬಳಿಕ ಭರ್ತಿಯಾಗಿದೆ. ಮಲ್ಪೆ, ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ಸಂಪರ್ಕ ಅಸ್ತವ್ಯಸ್ತವಾಗಿದೆ.
ದಾವಣಗೆರೆ ತಾಲ್ಲೂಕಿನ ಗುಮ್ಮನೂರು, ಮಡ್ಲೂರು, ಅಣಜಿ ಸೇರಿದಂತೆ ಕೆಲವು ಗ್ರಾಮಗಳಿಗೆ ನೀರು ನುಗ್ಗಿದೆ. ಕೆರೆಯಾಗಳ ಹಳ್ಳಿಯಲ್ಲಿ ಕೋಳಿ ಫಾರಂಗೂ ನೀರು ನುಗ್ಗಿ ಧಾರವಾಡದಲ್ಲಿ ಸಾಕಷ್ಟು ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದ ತಗ್ಗು ಪ್ರದೇಶದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ಸಾಕಷ್ಟು ಹಾನಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಕೆರೆಗಳು ಭರ್ತಿಯಾಗಿ ಕೋಡಿಬಿದ್ದಿವೆ.
ಹೀಗೆ ಬಹಳಷ್ಟು ಕಡೆ ಉತ್ತಮ ಮಳೆಯಾಗಿದ್ದು, ಜನರಿಗೆ ಸಾಕಷ್ಟು ತೊಂದರೆ ಉಂಟಾದ ವರದಿಯಾಗಿದೆ.

andolanait

Share
Published by
andolanait

Recent Posts

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

15 mins ago

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

35 mins ago

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…

40 mins ago

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…

1 hour ago

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

2 hours ago