ಕೃಷಿ

ರಾಜ್ಯದಲ್ಲಿ ಮತ್ತೆ 2 ದಿನ ಜೋರು ಮಳೆ ಸಾಧ್ಯತೆ

ಬೆಂಗಳೂರು– ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಮಳೆ ಆರ್ಭಟ ಜೋರಾಗಿದ್ದು, ಇನ್ನೂ ಎರಡು ದಿನ ಮುಂದುವರಿಯುವ ಮುನ್ಸೂಚನೆಗಳಿವೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿ ಗಾಳಿ ಉಂಟಾಗಿದ್ದು, ಒಳನಾಡಿನಲ್ಲಿ ಟ್ರಫ್ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಕೆಲವೆಡೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುತ್ತಿದ್ದು, ಕೆಲವೆಡೆ ಭಾರೀ ಮಳೆಯು ಆಗಿದೆ. ಸೋಮವಾರ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾದ ವರದಿಯಾಗಿದ್ದು, ನಿನ್ನೆಯೂ ಕೂಡ ಕೆಲವೆಡೆ ಭಾರಿ ಮಳೆಯಾಗಿದೆ. ರಾಯಚೂರು, ಯಾದಗಿರಿ, ಕಲ್ಬುರ್ಗಿ, ವಿಜಯಪುರ, ಗದಗ, ಚಿತ್ರದುರ್ಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾದ ವರದಿಯಾಗಿದೆ.
ಉಳಿದಂತೆ ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆ ಬಹುತೇಕ ಕಡೆಗಳಲ್ಲಿ ಬಿದ್ದಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ನಾಳೆಯಿಂದ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಆದರೆ ಪೂರ್ಣವಾಗಿ ನಿಲ್ಲುವುದಿಲ್ಲ. ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆಯುತ್ತಲೇ ಇರುತ್ತದೆ. ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಹಾಗೂ ಈಶಾನ್ಯ ಹಿಂಗಾರು ಆರಂಭದ ನಡುವಿನ ಬರುವ ಕಾಲ ಇದಾಗಿದ್ದು, ಈ ಸಂದರ್ಭದಲ್ಲಿ ಮಳೆಯಾಗುವುದು ಸಹಜ ಪ್ರಕ್ರಿಯೆ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.
ಕಳೆದ ಎರಡು ವಾರದಿಂದ ಒಣಹವೆ ಕಂಡು ಬಂದಿದ್ದು, ವಿವಿಧ ಬೆಳೆಗಳಿಗೆ ಮಳೆಯ ಅಗತ್ಯವೂ ಇತ್ತು. ಹೀಗಾಗಿ ರೈತ ಸಮುದಾಯಕ್ಕೆ ಈ ಮಳೆಯಿಂದ ಅನುಕೂಲಕರವಾಗಿವೆ. ಕೆಲವು ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳನ್ನು ಸೃಷ್ಟಿಸಿವೆ.
ದಾವಣಗೆರೆ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸಾಕಷ್ಟು ಮಳೆಯಾಗಿದ್ದು, ಕೆಲವು ಕೆರೆಗಳು ಕೂಡಿ ಬಿದ್ದಿದ್ದರೆ ಹಲವು ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿವೆ. ತಾಲೂಕಿನ ಅಣಜಿಕೆರೆ 40 ವರ್ಷಗಳ ಬಳಿಕ ಭರ್ತಿಯಾಗಿದೆ. ಮಲ್ಪೆ, ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ಸಂಪರ್ಕ ಅಸ್ತವ್ಯಸ್ತವಾಗಿದೆ.
ದಾವಣಗೆರೆ ತಾಲ್ಲೂಕಿನ ಗುಮ್ಮನೂರು, ಮಡ್ಲೂರು, ಅಣಜಿ ಸೇರಿದಂತೆ ಕೆಲವು ಗ್ರಾಮಗಳಿಗೆ ನೀರು ನುಗ್ಗಿದೆ. ಕೆರೆಯಾಗಳ ಹಳ್ಳಿಯಲ್ಲಿ ಕೋಳಿ ಫಾರಂಗೂ ನೀರು ನುಗ್ಗಿ ಧಾರವಾಡದಲ್ಲಿ ಸಾಕಷ್ಟು ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದ ತಗ್ಗು ಪ್ರದೇಶದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ಸಾಕಷ್ಟು ಹಾನಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಕೆರೆಗಳು ಭರ್ತಿಯಾಗಿ ಕೋಡಿಬಿದ್ದಿವೆ.
ಹೀಗೆ ಬಹಳಷ್ಟು ಕಡೆ ಉತ್ತಮ ಮಳೆಯಾಗಿದ್ದು, ಜನರಿಗೆ ಸಾಕಷ್ಟು ತೊಂದರೆ ಉಂಟಾದ ವರದಿಯಾಗಿದೆ.

andolanait

Share
Published by
andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago