ಮೈಸೂರು : ಕೇಂದ್ರ ಸರ್ಕಾರವು 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು ಡಿಸೆಂಬರ್ 15ರಿಂದ ನೋಂದಣಿ ಆರಂಭವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ. ರಾಜೇಂದ್ರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾಗಳ ಕಚೇರಿಯಲ್ಲಿ ನಡೆದ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಯನ್ನು ಖರೀದಿ ಏಜೆನ್ಸಿ ಯನ್ನಾಗಿ ಸರಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, ಜನವರಿ 1 ರಿಂದ ಮಾರ್ಚ್ 31 ರವರೆಗೆ ಭತ್ತ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಓರ್ವ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ 10 ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುವುದು. ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2040 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್ ಗೆ 3578 ರೂ ನಿಗದಿಪಡಿಸಲಾಗಿದೆ. ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 14 ಕಡೆಗಳಲ್ಲಿ ಮೈಸೂರಿನ ಎಪಿಎಂಸಿ ಆವರಣ, ಬಂಡಿಪಾಳ್ಯ, ನಂಜನಗೂಡಿನ ಎಪಿಎಂಸಿ ಆವರಣ, ಬಿಳಿಗೆರೆ ಖರೀದಿ ಕೇಂದ್ರ, ತಿ.ನರಸೀಪುರದ ಎಪಿಎಂಸಿ ಆವರಣ, ಬನ್ನೂರು ಎಪಿಎಂಸಿ ಆವರಣ, ಹುಣಸೂರು, ರತ್ನಪುರಿ ಎಂಪಿಎಂಸಿ ಆವರಣ, ಕೆ.ಆರ್. ನಗರದ ಚುಂಚನಕಟ್ಟೆ ಪ್ರವಾಸಿ ಮಂದಿರ (ಶ್ರೀರಾಮ ದೇವಸ್ಥಾನದ ಹತ್ತಿರ), ಸಾಲಿಗ್ರಾಮ, ಎಚ್.ಡಿ. ಕೋಟೆ ಎಪಿಎಂಸಿ, ಸರಗೂರು ಮತ್ತು ಪಿರಿಯಾಪಟ್ಟಣ, ಬೆಟ್ಟದಪುರ ಎಪಿಎಂಸಿ ಆವರಣದಲ್ಲಿ ಖರೀದಿ ಮಾಡಲಾಗುವುದು ಎಂದು ಹೇಳಿದರು ಆದರೆ ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತವನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಸೂಚನೆ ನೀಡಿದರು. ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೊಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ ಎಂದು ಅವರು ತಿಳಿಸಿದರು.
ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೊಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ , ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜನರಲ್ ಮ್ಯಾನೇಜರ್ ಪುಷ್ಪ ಮೈಸೂರು ಎಪಿಎಂಸಿ ಕಾರ್ಯದರ್ಶಿ ಕುಮಾರಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…