ಗುಂಡ್ಲುಪೇಟೆ: ವಿಧಾನಸಭಾ ಕ್ಷೇತ್ರದ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಅರಿಶಿಣ ಬೆಳೆಯನ್ನು ಬೆಳೆಯಲಾಗುತ್ತಿದೆ. ಜಿಲ್ಲೆಯ ಇದು ಪ್ರಮುಖ ವಾಣಿಜ್ಯ ಬೆಳೆಯೂ ಆಗಿದೆ. ಆದ್ದರಿಂದ ರೈತರಿಗೆ ಅನುಕೂಲವಾಗಲು ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಪ್ರಸ್ತುತ ಕ್ವಿಂಟಾಲ್ ಅರಿಶಿನಗೆ 5,500ರಿಂದ 6000 ರೂ. ಇದ್ದು ಅರಿಶಿಣ ಕೃಷಿ ಸೇರಿದಂತೆ ಉತ್ಪಾದನೆ ವೆಚ್ಚ ದುಬಾರಿಯಾಗಿದೆ. ಆದ್ದರಿಂದ ಕೇಂದ್ರದ ಎಂಎಸ್ಪಿ ಮಾರ್ಗಸೂಚಿ ಅನ್ವಯ ಪ್ರತಿ ಎಕರೆಗೆ 1,90,000ರೂ. ವೆಚ್ಚವಾಗುತ್ತದೆ. ಈಗಿರುವ ಬೆಲೆಯ ಅತಿ ಕಡಿಮೆಯಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಎಂಪಿಎಸ್ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯನ್ನು ನಮ್ಮ ರಾಜ್ಯಕ್ಕೂ ಜಾರಿಗೆ ತಂದು ಪ್ರತಿ ಕ್ವಿಂಟಾಲ್ ಅರಿಶಿಣ ಬೆಳೆಗೆ 17,500 ರೂಗಳನ್ನು ಸರ್ಕಾರದಿಂದ ಬೆಂಬಲ ಬೆಲೆಯಾಗಿ ಘೋಷಿಸಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಿಕೊಡುವಂತೆ ಶಾಸಕ ಸಿ,ಎಸ್ ನಿರಂಜನ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸದನದಲ್ಲಿ ಚುಕ್ಕಿ ಪ್ರಶ್ನೆಯ ಸಮಯದಲ್ಲಿ ಸದನದ ಗಮನ ಸಳೆಯುವುದಾಗಿ ಶಾಸಕರು ತಿಳಿಸಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…