ಕೃಷಿ

ತೆಂಗು ರೋಗ ಭಾದೆಗೆ ವೈಜ್ಞಾನಿಕ ಸಮೀಕ್ಷೆ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ತೆಂಗಿನ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾದಿತ ಪ್ರದೇಶಗಳಲ್ಲಿ ವೈಜ್ಞಾನಿಕ ಸಮೀಕ್ಷೆಯನ್ನು ತೋಟಗಾರಿಕೆ ಇಲಾಖೆ ವತಿಯಿಂದ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಸೋಮವಾರ ಜಿಲ್ಲಾಧಿಕಾರಿಗಳು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ತೆಂಗಿನ ಬೆಳೆಯು ಪ್ರಮುಖವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 74731 ಹೆಕ್ಟೇರ್ ವಿಸ್ತೀರ್ಣ ಬೆಳೆಯನ್ನು ಬೆಳೆಯಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಮದ್ದೂರು, ಕೆ.ಆರ್.ಪೇಟೆ ಹಾಗೂ ನಾಗಮಂಗಲ ತಾಲ್ಲೂಕು‌ಗಳಲ್ಲಿ ತೆಂಗಿನ ಬೆಳೆ ಹೆಚ್ಚಾಗಿ ಬೆಳೆಯಲಾಗುತ್ತದೆ. ತೆಂಗಿನ ಬೆಳೆಯಲ್ಲಿ ಬೇಸಿಗೆ ಸಮಯದಲ್ಲಿ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾಧೆಯು ಹೆಚ್ಚು ಕಂಡುಬರುತ್ತದೆ ಹಾಗೂ ಮದ್ದೂರು ತಾಲ್ಲೂಕು ಭಾಗದಲ್ಲಿ ಸದರಿ ರೋಗ ಹೆಚ್ಚಾಗಿ ಕಂಡುಬರುತ್ತಿದೆ ಎಂದರು.

ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾಧೆಯ ಬಗ್ಗೆ 1428 ಗ್ರಾಮಗಳಲ್ಲಿ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. 301822 ತೆಂಗಿನ ತಾಕುಗಗಳನ್ನು ಸಮೀಕ್ಷೆ 200 ಸಮೀಕ್ಷೆದಾರರನ್ನು ನಿಯೋಜಿಸಿ ಅವರಿಗೆ ತರಬೇತಿ ನೀಡಲಾಗಿದೆ. ಸಮೀಕ್ಷೆದಾರರು ಆಗಮಿಸಿದ ಸಂದರ್ಭದಲ್ಲಿ ರೈತರು ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾಧೆಯ ರೋಗ ತಡೆಗಟ್ಟಲು ತೋಟಗಾರಿಕೆ ಇಲಾಖೆ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅರಿವು ಮೂಡಿಸಿ ಎಂದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಹೆಚ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

35 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago