ತಿ.ನರಸೀಪುರ : ಕಬ್ಬಿನ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಡಿ.೨ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘ ತಿಳಿಸಿದೆ.
ಪಟ್ಟಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್ ಹಾಗೂ ತಾಲ್ಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಕಬ್ಬಿಗೆ ಎಫ್ಆರ್ಪಿ ನಿಗದಿ ಮಾಡಬೇಕು ಎಂದು ರಾಜ್ಯ ರೈತ ಸಂಘದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸೌಜನ್ಯಕ್ಕಾದರೂ ಸಚಿವರು ಭೇಟಿ ನೀಡಿ ಮನವಿ ಆಲಿಸಿಲ್ಲ ಎಂದು ಕಿಡಿಕಾರಿದರು.
ಸರ್ಕಾರ ಪೊಲೀಸರ ಮೂಲಕ ಪ್ರತಿಭಟನಾ ರೈತರನ್ನು ಬಂಧಿಸಿ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದೆ, ರೈತರ ಬೇಡಿಕೆಗಳನ್ನು ಕಾನೂನಿನಡಿ ಬಗೆಹರಿಸಬೇಕಿರುವ ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಸರ್ಕಾರದ ಈ ವರ್ತನೆಯನ್ನು ಖಂಡಿಸಿ ಹಾಗೂ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಡಿ.೨ ರಂದು ನಡುಂಲಿರುವ ಪ್ರತಿಭಟನೆಯಲ್ಲಿ ತಾಲ್ಲೂಕಿನಿಂದ ರೈತರು, ಕಬ್ಬು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಂಘದ ಮುಖಂಡರಾದ ಬಿ.ಪಿ.ಪರಶಿವಮೂರ್ತಿ, ಬನ್ನಹಳ್ಳಿಹುಂಡಿ ರಾಜೇಂದ್ರ, ಪ್ರದೀಪ್, ಗೌರಿಶಂಕರ್, ಶೇಖರ್, ಆದಿಬೆಟ್ಟಹಳ್ಳಿ ಕುಮಾರ್, ಉಮೇಶ್, ಕೆ.ಜಿ.ಗುರುಸ್ವಾಮಿ ಹಾಜರಿದ್ದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…