ಕೃಷಿ

ಕಬ್ಬಿಗೆ ಹೆಚ್ಚುವರಿಯಾಗಿ 50 ರೂ. ನೀಡುವ ಸರ್ಕಾರದ ಆದೇಶಕ್ಕೆ ರೈತರ ತಿರಸ್ಕಾರ

ಧರಣಿ ಮುಂದುವರಿಸಲು ನಿರ್ಧಾರ

ಬೆಂಗಳೂರು: ಕಬ್ಬು ಉಪ ಉತ್ಪನ್ನಗಳಿಂದ ಟನ್ ಗೆ 126 ರೂ. ಲಾಭ ಬರುತ್ತಿದ್ದು, ಅದರಲ್ಲಿ ಮೊದಲನೇ ಕಂತಾಗಿ ರೈತರಿಗೆ ಸೂಕ್ತ ಹಾಗೂ ಲಾಭದಾಯಕ ಬೆಲೆ (ಎಫ್ ಆರ್ ಪಿ) ಗೆ ಹೆಚ್ಚುವರಿಯಾಗಿ 50 ರೂ ನೀಡುವಂತೆ ಕಾರ್ಖಾನೆಗಳಿಗೆ
ನಿರ್ದೇಶಿಸುವುದಾಗಿ ಸಕ್ಕರೆ ಸಚಿವ ಶಂಕರ ಮುನೇನಕೊಪ್ಪ ತಿಳಿಸಿದರು.
ವಿಕಾಸಸೌಧದ ಸಭಾಂಗಣದಲ್ಲಿ ಸೋಮವಾರ ನಡೆದ
ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಈ ಮಾಹಿತಿ ನೀಡಿದರು.
ಆದರೆ ಸಚಿವರ ಈ ನಿರ್ಧಾರವನ್ನು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿರಸ್ಕಾರ ಮಾಡಿ ಚಳವಳಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.
ನಂತರ ಸಚಿವರು ನಾಳೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳೋಣ ಎಂದು ತಿಳಿಸಿದರು.

ಸಕ್ಕರೆ ಕಾರ್ಖಾನೆಗಳು ಎಥೆನಾಲ್ ಉತ್ಪಾದನೆಗೆ ಪ್ರೋತ್ಸಾಹಧನ, ಕಡಿಮೆ ಬಡ್ಡಿಗೆ ಸಾಲ, ಎಥೆನಾಲ್ ಖಚಿತ ಖರೀದಿ
ಭರವಸೆ, ತೆರಿಗೆ ವಿನಾಯಿತಿ, ವಿದ್ಯುತ್ ಖರೀದಿ ಭರವಸೆ, ಕಡಿಮೆ ಬಡ್ಡಿ ಧನ ಸಹಾಯ, ಸಕ್ಕರೆ ರಪ್ತು ಪ್ರೋತ್ಸಾಹದ ಇನ್ನಿತರ ಸವಲತ್ತುಗಳನ್ನು ಸರ್ಕಾರದಿಂದ ಪಡೆಯುವುದರಿಂದ ಸರ್ಕಾರದ ಆದೇಶಗಳನ್ನು ಪಾಲಿಸಬೇಕು.
ಸಕ್ಕರೆ ಕಾರ್ಖಾನೆಗಳು ಕಟಾವ್ ಕೂಲಿ ಸಾಗಾಣಿಕೆ ವೆಚ್ಚವನ್ನು 250 ರಿಂದ 300 ಏರಿಕೆ ಮಾಡಿದ್ದಾರೆ. ಈ ವೆಚ್ಚವನ್ನು ಕಡಿಮೆ ಮಾಡಿದರೆ ಟನ್ ಗೆ ರೈತರಿಗೆ 150 -200 ಉಳಿಯಬಹುದು ಈ ದಿಕ್ಕಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
ಉತ್ತರ ಪ್ರದೇಶ, ಪಂಜಾಬ್, ಹರಿಯಾಣ , ತಮಿಳುನಾಡು ತೆಲಂಗಾಣ ರಾಜ್ಯಗಳಲ್ಲೂ ಹೆಚ್ಚುವರಿ ರಾಜ್ಯ ಸಲಹಾ ಬೆಲೆ ನಿಗದಿ ಮಾಡಿದ್ದಾರೆ. ಅದನ್ನು ಗಮನಿಸಿ ಹೆಚ್ಚುವರಿ ಬೆಲೆ ನಿಗದಿಮಾಡಲಿ. ಸಕ್ಕರೆ ಇಳುವರಿಯಲ್ಲಿ ಮೋಸ ತಪ್ಪಿಸಿದರೆ ರೈತರಿಗೆ ಒಂದು ಇಳುವರಿಗೆ 300 ಹೆಚ್ಚಳವಾಗುತ್ತದೆ. ಎಲ್ಲವನ್ನು ಸರ್ಕಾರ ಗಮನಿಸಿ ತೀರ್ಮಾನ ಮಾಡಿ ಎಂದು ಸಚಿವರಿಗೆ ತಿಳಿಸಿದರು.
ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ಮುಂದುವರಿಯುತ್ತದೆ ಎಂದು ಶಾಂತಕುಮಾರ್ ತಿಳಿಸಿದರು.
ಸಭೆಯಲ್ಲಿ ಕಬ್ಬು ಖರೀದಿ ಮಂಡಳಿ ಸದಸ್ಯರು, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲ್ಕರಿ ಮತ್ತಿತರರು ಇದ್ದರು.

andolanait

Share
Published by
andolanait
Tags: ಕೃಷಿ

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

9 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

10 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

10 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

10 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

10 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

11 hours ago