ಕೃಷಿ

ಕಬ್ಬಿಗೆ ಹೆಚ್ಚುವರಿಯಾಗಿ 50 ರೂ. ನೀಡುವ ಸರ್ಕಾರದ ಆದೇಶಕ್ಕೆ ರೈತರ ತಿರಸ್ಕಾರ

ಧರಣಿ ಮುಂದುವರಿಸಲು ನಿರ್ಧಾರ

ಬೆಂಗಳೂರು: ಕಬ್ಬು ಉಪ ಉತ್ಪನ್ನಗಳಿಂದ ಟನ್ ಗೆ 126 ರೂ. ಲಾಭ ಬರುತ್ತಿದ್ದು, ಅದರಲ್ಲಿ ಮೊದಲನೇ ಕಂತಾಗಿ ರೈತರಿಗೆ ಸೂಕ್ತ ಹಾಗೂ ಲಾಭದಾಯಕ ಬೆಲೆ (ಎಫ್ ಆರ್ ಪಿ) ಗೆ ಹೆಚ್ಚುವರಿಯಾಗಿ 50 ರೂ ನೀಡುವಂತೆ ಕಾರ್ಖಾನೆಗಳಿಗೆ
ನಿರ್ದೇಶಿಸುವುದಾಗಿ ಸಕ್ಕರೆ ಸಚಿವ ಶಂಕರ ಮುನೇನಕೊಪ್ಪ ತಿಳಿಸಿದರು.
ವಿಕಾಸಸೌಧದ ಸಭಾಂಗಣದಲ್ಲಿ ಸೋಮವಾರ ನಡೆದ
ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಈ ಮಾಹಿತಿ ನೀಡಿದರು.
ಆದರೆ ಸಚಿವರ ಈ ನಿರ್ಧಾರವನ್ನು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿರಸ್ಕಾರ ಮಾಡಿ ಚಳವಳಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.
ನಂತರ ಸಚಿವರು ನಾಳೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳೋಣ ಎಂದು ತಿಳಿಸಿದರು.

ಸಕ್ಕರೆ ಕಾರ್ಖಾನೆಗಳು ಎಥೆನಾಲ್ ಉತ್ಪಾದನೆಗೆ ಪ್ರೋತ್ಸಾಹಧನ, ಕಡಿಮೆ ಬಡ್ಡಿಗೆ ಸಾಲ, ಎಥೆನಾಲ್ ಖಚಿತ ಖರೀದಿ
ಭರವಸೆ, ತೆರಿಗೆ ವಿನಾಯಿತಿ, ವಿದ್ಯುತ್ ಖರೀದಿ ಭರವಸೆ, ಕಡಿಮೆ ಬಡ್ಡಿ ಧನ ಸಹಾಯ, ಸಕ್ಕರೆ ರಪ್ತು ಪ್ರೋತ್ಸಾಹದ ಇನ್ನಿತರ ಸವಲತ್ತುಗಳನ್ನು ಸರ್ಕಾರದಿಂದ ಪಡೆಯುವುದರಿಂದ ಸರ್ಕಾರದ ಆದೇಶಗಳನ್ನು ಪಾಲಿಸಬೇಕು.
ಸಕ್ಕರೆ ಕಾರ್ಖಾನೆಗಳು ಕಟಾವ್ ಕೂಲಿ ಸಾಗಾಣಿಕೆ ವೆಚ್ಚವನ್ನು 250 ರಿಂದ 300 ಏರಿಕೆ ಮಾಡಿದ್ದಾರೆ. ಈ ವೆಚ್ಚವನ್ನು ಕಡಿಮೆ ಮಾಡಿದರೆ ಟನ್ ಗೆ ರೈತರಿಗೆ 150 -200 ಉಳಿಯಬಹುದು ಈ ದಿಕ್ಕಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
ಉತ್ತರ ಪ್ರದೇಶ, ಪಂಜಾಬ್, ಹರಿಯಾಣ , ತಮಿಳುನಾಡು ತೆಲಂಗಾಣ ರಾಜ್ಯಗಳಲ್ಲೂ ಹೆಚ್ಚುವರಿ ರಾಜ್ಯ ಸಲಹಾ ಬೆಲೆ ನಿಗದಿ ಮಾಡಿದ್ದಾರೆ. ಅದನ್ನು ಗಮನಿಸಿ ಹೆಚ್ಚುವರಿ ಬೆಲೆ ನಿಗದಿಮಾಡಲಿ. ಸಕ್ಕರೆ ಇಳುವರಿಯಲ್ಲಿ ಮೋಸ ತಪ್ಪಿಸಿದರೆ ರೈತರಿಗೆ ಒಂದು ಇಳುವರಿಗೆ 300 ಹೆಚ್ಚಳವಾಗುತ್ತದೆ. ಎಲ್ಲವನ್ನು ಸರ್ಕಾರ ಗಮನಿಸಿ ತೀರ್ಮಾನ ಮಾಡಿ ಎಂದು ಸಚಿವರಿಗೆ ತಿಳಿಸಿದರು.
ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ಮುಂದುವರಿಯುತ್ತದೆ ಎಂದು ಶಾಂತಕುಮಾರ್ ತಿಳಿಸಿದರು.
ಸಭೆಯಲ್ಲಿ ಕಬ್ಬು ಖರೀದಿ ಮಂಡಳಿ ಸದಸ್ಯರು, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲ್ಕರಿ ಮತ್ತಿತರರು ಇದ್ದರು.

andolanait

Share
Published by
andolanait
Tags: ಕೃಷಿ

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

2 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

12 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

17 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

17 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

17 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

22 hours ago