ಧರಣಿ ಮುಂದುವರಿಸಲು ನಿರ್ಧಾರ
ಬೆಂಗಳೂರು: ಕಬ್ಬು ಉಪ ಉತ್ಪನ್ನಗಳಿಂದ ಟನ್ ಗೆ 126 ರೂ. ಲಾಭ ಬರುತ್ತಿದ್ದು, ಅದರಲ್ಲಿ ಮೊದಲನೇ ಕಂತಾಗಿ ರೈತರಿಗೆ ಸೂಕ್ತ ಹಾಗೂ ಲಾಭದಾಯಕ ಬೆಲೆ (ಎಫ್ ಆರ್ ಪಿ) ಗೆ ಹೆಚ್ಚುವರಿಯಾಗಿ 50 ರೂ ನೀಡುವಂತೆ ಕಾರ್ಖಾನೆಗಳಿಗೆ
ನಿರ್ದೇಶಿಸುವುದಾಗಿ ಸಕ್ಕರೆ ಸಚಿವ ಶಂಕರ ಮುನೇನಕೊಪ್ಪ ತಿಳಿಸಿದರು.
ವಿಕಾಸಸೌಧದ ಸಭಾಂಗಣದಲ್ಲಿ ಸೋಮವಾರ ನಡೆದ
ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಈ ಮಾಹಿತಿ ನೀಡಿದರು.
ಆದರೆ ಸಚಿವರ ಈ ನಿರ್ಧಾರವನ್ನು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿರಸ್ಕಾರ ಮಾಡಿ ಚಳವಳಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.
ನಂತರ ಸಚಿವರು ನಾಳೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳೋಣ ಎಂದು ತಿಳಿಸಿದರು.
ಸಕ್ಕರೆ ಕಾರ್ಖಾನೆಗಳು ಎಥೆನಾಲ್ ಉತ್ಪಾದನೆಗೆ ಪ್ರೋತ್ಸಾಹಧನ, ಕಡಿಮೆ ಬಡ್ಡಿಗೆ ಸಾಲ, ಎಥೆನಾಲ್ ಖಚಿತ ಖರೀದಿ
ಭರವಸೆ, ತೆರಿಗೆ ವಿನಾಯಿತಿ, ವಿದ್ಯುತ್ ಖರೀದಿ ಭರವಸೆ, ಕಡಿಮೆ ಬಡ್ಡಿ ಧನ ಸಹಾಯ, ಸಕ್ಕರೆ ರಪ್ತು ಪ್ರೋತ್ಸಾಹದ ಇನ್ನಿತರ ಸವಲತ್ತುಗಳನ್ನು ಸರ್ಕಾರದಿಂದ ಪಡೆಯುವುದರಿಂದ ಸರ್ಕಾರದ ಆದೇಶಗಳನ್ನು ಪಾಲಿಸಬೇಕು.
ಸಕ್ಕರೆ ಕಾರ್ಖಾನೆಗಳು ಕಟಾವ್ ಕೂಲಿ ಸಾಗಾಣಿಕೆ ವೆಚ್ಚವನ್ನು 250 ರಿಂದ 300 ಏರಿಕೆ ಮಾಡಿದ್ದಾರೆ. ಈ ವೆಚ್ಚವನ್ನು ಕಡಿಮೆ ಮಾಡಿದರೆ ಟನ್ ಗೆ ರೈತರಿಗೆ 150 -200 ಉಳಿಯಬಹುದು ಈ ದಿಕ್ಕಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
ಉತ್ತರ ಪ್ರದೇಶ, ಪಂಜಾಬ್, ಹರಿಯಾಣ , ತಮಿಳುನಾಡು ತೆಲಂಗಾಣ ರಾಜ್ಯಗಳಲ್ಲೂ ಹೆಚ್ಚುವರಿ ರಾಜ್ಯ ಸಲಹಾ ಬೆಲೆ ನಿಗದಿ ಮಾಡಿದ್ದಾರೆ. ಅದನ್ನು ಗಮನಿಸಿ ಹೆಚ್ಚುವರಿ ಬೆಲೆ ನಿಗದಿಮಾಡಲಿ. ಸಕ್ಕರೆ ಇಳುವರಿಯಲ್ಲಿ ಮೋಸ ತಪ್ಪಿಸಿದರೆ ರೈತರಿಗೆ ಒಂದು ಇಳುವರಿಗೆ 300 ಹೆಚ್ಚಳವಾಗುತ್ತದೆ. ಎಲ್ಲವನ್ನು ಸರ್ಕಾರ ಗಮನಿಸಿ ತೀರ್ಮಾನ ಮಾಡಿ ಎಂದು ಸಚಿವರಿಗೆ ತಿಳಿಸಿದರು.
ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ಮುಂದುವರಿಯುತ್ತದೆ ಎಂದು ಶಾಂತಕುಮಾರ್ ತಿಳಿಸಿದರು.
ಸಭೆಯಲ್ಲಿ ಕಬ್ಬು ಖರೀದಿ ಮಂಡಳಿ ಸದಸ್ಯರು, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲ್ಕರಿ ಮತ್ತಿತರರು ಇದ್ದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…