ಬೆಂಗಳೂರು: ಮುಖ್ಯಮಂತ್ರಿಗಳು ಭರವಸೆ ನೀಡಿರುವಂತೆ ಕಬ್ಬಿನ ಎಫ್ ಆರ್ ಪಿ ದರ ಏರಿಕೆ, ಕಟಾವು ಕೂಲಿ ಸಾಗಾಣಿಕೆ ವೆಚ್ಚ ಕಡಿತವಾಗದಿದ್ದರೇ 26ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಬ್ಬು ಬೆಳಗಾರರ ಒಕ್ಕೂಟ ಎಚ್ಚರಿಕೆ ನೀಡಿದೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ 27ನೇ ದಿನದ ಧರಣಿ ನಿರತ ರೈತರು ಈ ನಿರ್ಧಾರ ಕೈಗೊಂಡಿದ್ದಾರೆ. ವಿಶ್ವ ರೈತ ದಿನದ ಆಚರಣೆಯೊಳಗೆ (ಡಿ.23) ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ಮುತ್ತಿಗೆ ಅನಿವಾರ್ಯ ಎಂದು
ಕಬ್ಬು ಬೆಳಗಾರರ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ನಾಲ್ಕು ತಿಂಗಳಿಂದ ಕಬ್ಬು ನುರಿಸಿರುವ ಕಾರ್ಖಾನೆಗಳು ರೈತರಿಗೆ ಕಬ್ಬಿನ ಹಣವನ್ನೇ ಪಾವತಿಸಿಲ್ಲ. ಕೆಲವು ಕಾರ್ಖಾನೆಗಳು ನೆಪ ಮಾತ್ರಕ್ಕೆ ಅಲ್ಪ ಸ್ವಲ್ಪ ಪಾವತಿಸಿವೆ.
ಎಫ್ ಆರ್ ಪಿ ನಿಯಮ ಪ್ರಕಾರ 14 ದಿವಸದಲ್ಲಿ ಪಾವತಿಸಬೇಕು. ಆದರೆ ಕಾರ್ಖಾನೆಗಳು ನಿಯಮ ಉಲ್ಲಂಘನೆ ಮಾಡಿ ಎರಡು ಸಾವಿರ ಕೋಟಿಗೂ ಹೆಚ್ಚು ಹಣ ಉಳಿಸಿಕೊಂಡಿವೆ. ರಾಜ್ಯ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
23ರಂದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟದ ವಿಶ್ವ ರೈತ ದಿನಾಚರಣೆಯಲ್ಲಿ ಕೃಷಿ ಕ್ಷೇತ್ರದಲ್ಲಿ ದುಡಿದ ಕಾಯಕಯೋಗಿಗಳಿಗೆ ಗೌರವ ಪುರಸ್ಕಾರ ನೀಡಲು ಸಂಯುಕ್ತ ಕಿಸಾನ್ ಮೋರ್ಚಾ *ರಾಷ್ಟ್ರೀಯ ನಾಯಕ ಜಗಜಿತ್ ಸಿಂಗ್ ಧಲೆವಾಲ ಪಂಜಾಬಿನಿಂದ ಆಗಮಿಸುತ್ತಿದ್ದಾರೆ.
19/20ರಂದು ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತ ಮುಖಂಡರು ಹಾಗೂ ಸಂಸದರ ನಿಯೋಗದೊಂದಿಗೆ ಕೇಂದ್ರ ಕೃಷಿ ಸಚಿವ ಹಾಗೂ ಆಹಾರ ಸಚಿವರನ್ನು ಭೇಟಿ ಮಾಡಿ ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದರು. ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಪರಶುರಾಮ್, ಸುರೇಶ್, ರೇವಣ್ಣ, ಮೈಸೂರು ಜಿಲ್ಲೆಯ ರಂಗಸಮುದ್ರ, ಹಿಟ್ಟುವಳ್ಳಿ ಗ್ರಾಮದ ನೂರಾರು ರೈತರು ಭಾಗವಹಿಸಿದ್ದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…