ಕೃಷಿ

ಕೃಷಿ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳಿಗೆ ಸಂಶೋಧನೆಗಳ ಮೂಲಕ ಪರಿಹಾರ ಕಂಡುಕೊಳ್ಳಬೇಕು : ಸಿಎಂ ಬೊಮ್ಮಾಯಿ

ಬೆಂಗಳೂರು : ಕೃಷಿ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳಿಗೆ ಕೃಷಿ ವಿಶ್ವವಿದ್ಯಾಲಯಗಳು ಹೊಸ ಹೊಸ ಸಂಶೋಧನೆಗಳ ಮೂಲಕ ಪರಿಹಾರವನ್ನು ಕಂಡು ಹಿಡಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅರಮನೆ ಮೈದಾನದಲ್ಲಿ ಆರಂಭವಾದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೃಷಿ ಕ್ಷೇತ್ರದ ಬದಲಾವಣೆಗೆ ಭಾರತವನ್ನು ಸನ್ನದ್ದುಗೊಳಿಸುವ ನಿಟ್ಟಿನಲ್ಲಿ ಕೃಷಿ ವಿವಿಗಳ ಪಾತ್ರ ದೊಡ್ಡದಿದೆ. ಹಳೆಯ ಸಂಶೋಧನಾ ಮಾದರಿಯನ್ನು ಬಿಟ್ಟು ಅತಿಯಾದ ನೀರಿನ ಬಳಕೆ, ಹವಾಮಾನ ವೈಪರೀತ್ಯ, ರಾಸಾಯಾನಿಕ ಬಳಕೆಯ ದುಷ್ಪರಿಣಾಮ ಮೊದಲಾದ ವಿಚಾರಗಳು ಹಾಗೂ ಸವಾಲುಗಳ ಬಗ್ಗೆ ರೈತರ ಹೊಲವನ್ನೇ ಕ್ಯಾಂಪಸ್‍ನ್ನಾಗಿ ಮಾಡಿಕೊಂಡು ಸಂಶೋಧನೆ ನಡೆಸಬೇಕು ಎಂದರು.

ಒಳ್ಳೆಯ ಬೀಜ, ಸರಿಯಾದ ಔಷ ಹಾಗೂ ಸೂಕ್ತ ವಿಧಾನವನ್ನು ರೈತರಿಗೆ ಒದಗಿಸಿದಾಗ ಅವರ ಅನಿಶ್ಚಿತತೆ ದೂರವಾಗುತ್ತದೆ ಎಂದು ಹೇಳಿದರು.ವಿದೇಶದಲ್ಲಿ ಮುಂದಿನ ಋತುಮಾನದಲ್ಲಿ ಎಷ್ಟು ಮಳೆ, ಎಷ್ಟು ಬಿತ್ತನೆ, ಎಷ್ಟು ಉತ್ಪಾದನೆ, ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಮಾರುಕಟ್ಟೆಯನ್ನು ಆಧರಿಸಿ ಬೆಲೆ ನಿಗದಿ ಮಾಡುವ ಔಟ್‍ಲುಕ್ ತಯಾರಿಸುತ್ತಾರೆ. ಅದೇ ರೀತಿ ನಮ್ಮ ಕೃಷಿ ಬೆಲೆ ಆಯೋಗವು ಬೆಳೆಯುವ ಬೆಳೆಯುವ ಕರ್ಚಿನ ಆಧಾರದ ಮೇಲೆ ವೈಜ್ಞಾನಿಕವಾಗಿ ಔಟ್‍ಲುಕ್ ರಿಪೋರ್ಟ್‍ನ್ನು ಸಿದ್ದಪಡಿಸಬೇಕು ಎಂದರು.

ಗ್ರಾಮೀಣ ಹಣಕಾಸು ವ್ಯವಸ್ಥೆ ಬದಲಾಗಬೇಕಿದೆ. ಕೇಂದ್ರ ಕೃಷಿ ಹಾಗೂ ಹಣಕಾಸು ಸಚಿವರಿಗೆ ಗ್ರಾಮೀಣ ಸಾಲದ ಪ್ರಮಾಣವನ್ನು ಹೆಚ್ಚಿಸುವಂತೆ ಒತ್ತಾಯ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗಿದ್ದು, ಮೂರು ಲಕ್ಷ ಹೊಸ ರೈತರಿಗೆ ಸಾಲ ನೀಡಲಾಗಿದೆ ಇನ್ನು 10 ದಿನದಲ್ಲಿ ರೈತ ಶಕ್ತಿಯೋಜನೆಯನ್ನು ಪ್ರಾರಂಭಿಸಲಾಗುವುದು. 11 ಲಕ್ಷ ರೈತ ಮಕ್ಕಳು ವಿದ್ಯಾನಿ ಯೋಜನೆ ಪ್ರಯೋಜನ ಪಡೆದಿದ್ದಾರೆ. ನಾನು ಕಳೆದ 30 ವರ್ಷಗಳಿಂದಲೂ ಸಿರಿಧಾನ್ಯದ ಊಟ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಸಿರಿಧಾನ್ಯ ಪೋಷ್ಟಿಕಾಂಶದಿಂದ ಕೂಡಿದೆ. ಆರೋಗ್ಯಯುತವಾದದ್ದು ಅದಕ್ಕೆ ಹೆಚ್ಚಿನ ಪೆÇ್ರೀತ್ಸಾಹ ಕೊಡುತ್ತಿದ್ದೇವೆ. ಎರಡು ಮೂರು ವರ್ಷಗಳಿಂದ ಪಡಿತರ ವ್ಯವಸ್ಥೆಯಲ್ಲಿ ರಾಗಿ ನೀಡುತ್ತಿದ್ದೇವೆ ಎಂದು ಹೇಳಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಬಡವರ ಆಹಾರವಾಗಿದ್ದ ಸಿರಿಧಾನ್ಯವು ಇಂದು ಶ್ರೀಮಂತರ ಆಹಾರವಾಗಿದೆ. ರೋಗನಿರೋಧಕ ಶಕ್ತಿ ಹೊಂದಿದೆ. ಸಿರಿಧಾನ್ಯಗಳಿಗೆ 10 ಹೆಕ್ಟೇರ್‍ಗೆ 10 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಕೈಲಾಸ್ ಚೌಧರಿ, ಸಂಸದ ಪಿ.ಸಿ.ಮೋಹನ್, ವಿಧಾನಪರಿಷತ್ ಸದಸ್ಯರಾದ ಆ.ದೇವೇಗೌಡ, ಟಿ.ಎ.ಶರವಣ, ಛಲವಾದಿ ನಾರಾಯಣಸ್ವಾಮಿ, ಕೃಷಿ ಇಲಾಖೆ ಕಾರ್ಯದರ್ಶಿ ಕಳಸ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

andolanait

Share
Published by
andolanait

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

8 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

8 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

10 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

10 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

10 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

12 hours ago