ಬೆಂಗಳೂರು : ಕೃಷಿ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳಿಗೆ ಕೃಷಿ ವಿಶ್ವವಿದ್ಯಾಲಯಗಳು ಹೊಸ ಹೊಸ ಸಂಶೋಧನೆಗಳ ಮೂಲಕ ಪರಿಹಾರವನ್ನು ಕಂಡು ಹಿಡಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅರಮನೆ ಮೈದಾನದಲ್ಲಿ ಆರಂಭವಾದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಒಳ್ಳೆಯ ಬೀಜ, ಸರಿಯಾದ ಔಷ ಹಾಗೂ ಸೂಕ್ತ ವಿಧಾನವನ್ನು ರೈತರಿಗೆ ಒದಗಿಸಿದಾಗ ಅವರ ಅನಿಶ್ಚಿತತೆ ದೂರವಾಗುತ್ತದೆ ಎಂದು ಹೇಳಿದರು.ವಿದೇಶದಲ್ಲಿ ಮುಂದಿನ ಋತುಮಾನದಲ್ಲಿ ಎಷ್ಟು ಮಳೆ, ಎಷ್ಟು ಬಿತ್ತನೆ, ಎಷ್ಟು ಉತ್ಪಾದನೆ, ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಮಾರುಕಟ್ಟೆಯನ್ನು ಆಧರಿಸಿ ಬೆಲೆ ನಿಗದಿ ಮಾಡುವ ಔಟ್ಲುಕ್ ತಯಾರಿಸುತ್ತಾರೆ. ಅದೇ ರೀತಿ ನಮ್ಮ ಕೃಷಿ ಬೆಲೆ ಆಯೋಗವು ಬೆಳೆಯುವ ಬೆಳೆಯುವ ಕರ್ಚಿನ ಆಧಾರದ ಮೇಲೆ ವೈಜ್ಞಾನಿಕವಾಗಿ ಔಟ್ಲುಕ್ ರಿಪೋರ್ಟ್ನ್ನು ಸಿದ್ದಪಡಿಸಬೇಕು ಎಂದರು.
ರಾಜ್ಯದಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗಿದ್ದು, ಮೂರು ಲಕ್ಷ ಹೊಸ ರೈತರಿಗೆ ಸಾಲ ನೀಡಲಾಗಿದೆ ಇನ್ನು 10 ದಿನದಲ್ಲಿ ರೈತ ಶಕ್ತಿಯೋಜನೆಯನ್ನು ಪ್ರಾರಂಭಿಸಲಾಗುವುದು. 11 ಲಕ್ಷ ರೈತ ಮಕ್ಕಳು ವಿದ್ಯಾನಿ ಯೋಜನೆ ಪ್ರಯೋಜನ ಪಡೆದಿದ್ದಾರೆ. ನಾನು ಕಳೆದ 30 ವರ್ಷಗಳಿಂದಲೂ ಸಿರಿಧಾನ್ಯದ ಊಟ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಸಿರಿಧಾನ್ಯ ಪೋಷ್ಟಿಕಾಂಶದಿಂದ ಕೂಡಿದೆ. ಆರೋಗ್ಯಯುತವಾದದ್ದು ಅದಕ್ಕೆ ಹೆಚ್ಚಿನ ಪೆÇ್ರೀತ್ಸಾಹ ಕೊಡುತ್ತಿದ್ದೇವೆ. ಎರಡು ಮೂರು ವರ್ಷಗಳಿಂದ ಪಡಿತರ ವ್ಯವಸ್ಥೆಯಲ್ಲಿ ರಾಗಿ ನೀಡುತ್ತಿದ್ದೇವೆ ಎಂದು ಹೇಳಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಬಡವರ ಆಹಾರವಾಗಿದ್ದ ಸಿರಿಧಾನ್ಯವು ಇಂದು ಶ್ರೀಮಂತರ ಆಹಾರವಾಗಿದೆ. ರೋಗನಿರೋಧಕ ಶಕ್ತಿ ಹೊಂದಿದೆ. ಸಿರಿಧಾನ್ಯಗಳಿಗೆ 10 ಹೆಕ್ಟೇರ್ಗೆ 10 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಕೈಲಾಸ್ ಚೌಧರಿ, ಸಂಸದ ಪಿ.ಸಿ.ಮೋಹನ್, ವಿಧಾನಪರಿಷತ್ ಸದಸ್ಯರಾದ ಆ.ದೇವೇಗೌಡ, ಟಿ.ಎ.ಶರವಣ, ಛಲವಾದಿ ನಾರಾಯಣಸ್ವಾಮಿ, ಕೃಷಿ ಇಲಾಖೆ ಕಾರ್ಯದರ್ಶಿ ಕಳಸ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…