ಕೃಷಿ

ಟಿಪ್ಪು ನಿಜಕನಸುಗಳು ನಾಟಕ : ಕೃತಿ, ನಾಟಕ ಪ್ರದರ್ಶನ ತಡೆಗೆ ಆಗ್ರಹ

ಮೈಸೂರು: ಟಿಪ್ಪು ನಿಜಕನಸುಗಳು ಹೆಸರಿನಲ್ಲಿ ತನ್ನ ಸುಳ್ಳು ಅಜೆಂಡಾ ಹೇರಲು ಹೊರಟಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ಬಂಧಿಸಿ, ಟಿಪ್ಪು ನಿಜಕನಸುಗಳು ನಾಟಕ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಜತೆಗೆ ನಾಟಕ ಪ್ರದರ್ಶನವನ್ನೂ ತಡೆಹಿಡಿಯಬೇಕು ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್ ಒತ್ತಾಯಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರ ಕ್ಷೇಮ ಕಾಪಾಡುವ ಜತೆಗೆ ಸುಭಿಕ್ಷ ನೆಲೆಸಲು ಸರ್ಕಾರ ಮುಂದಾಗಬೇಕು. ಆದರೆ, ಚುನಾವಣೆಯಲ್ಲಿ ಜನರಿಗೆ ಮುಖ ತೋರಿಸಲಾಗದ ಬಿಜೆಪಿ ನೆಗಟಿವ್ ರಾಜಕೀಯ ಮಾಡುತ್ತಿದೆ ಎಂದು ದೂರಿದರು.
ಟಿಪ್ಪು ಪತ್ರಿಮೆ ಸ್ಥಾಪನೆ ಹೇಳಿಕೆ ವಿಚಾರವಾಗಿ ಬಜರಂಗದಳದ ಸಕಲೇಶಪುರ ರಘು, ಮೈಸೂರಿನ ಬಿಜೆಪಿ ಮುಖಂಡ ಗಿರಿಧರ್ ಅವರು ತನ್ವೀರ್ ಸೇಠ್ ಅವರನ್ನು ಸಂಹಾರ ಮಾಡಬೇಕು ಎಂದು ಹೇಳಿಕೆ ನೀಡಿರುವುದು ಖಂಡ ನೀಯ. ಇವರಿಬ್ಬರ ವಿರುದ್ಧ ಅಲ್ಲಿನ ಜಿಲ್ಲಾಡಳಿತಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಮ್ಮ ಪಕ್ಷದ ಶಾಸಕ, ಮಾಜಿ ಸಚಿವರೊಬ್ಬರಿಗೆ ಕೊಲೆ ಬೆದರಿಕೆ ಹಾಕಿದರೂ ರಾಜ್ಯ ಕಾಂಗ್ರೆಸ್‌ನ ಯಾವೊಬ್ಬ ನಾಯಕರೂ ತನ್ವೀರ್ ಸೇಠ್ ರಕ್ಷಣೆಗೆ ಮುಂದಾಗದಿರುವುದು ಖಂಡನೀಯ ಎಂದರು.
ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಜಿಲ್ಲಾಧ್ಯಕ್ಷ ರಫತ್ ಖಾನ್, ಜಿಲ್ಲಾ ಉಪಾಧ್ಯಕ್ಷ ಸ್ವಾಮಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago